ರಾಜ್ಯ ಹೆದ್ದಾರಿಗಳ ಸುಧಾರಣೆಯಿಂದ ಅಂತರರಾಜ್ಯ ವ್ಯಾಪಾರ ವೃದ್ಧಿ: ಐಹೊಳೆ
Improvement of state highways will increase interstate trade: Aihole
ರಾಯಬಾಗ 26: ರಾಜ್ಯ ಹೆದ್ದಾರಿಗಳ ರಸ್ತೆಗಳು ಸುಧಾರಿಸುವುದರಿಂದ ಅಂತರರಾಜ್ಯ ವ್ಯಾಪಾರ ವೃದ್ಧಿಯಾಗುವುದು ಜೊತೆಗೆ ರೈತರು ಬೆಳೆದ ಬೆಳೆಗಳನ್ನು ಸಾಗಿಸಲು ಅನುಕೂಲವಾಗುವುದು ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 6 ಕೋಟಿ ರೂ. ಅನುದಾನದಲ್ಲಿ ಮಂಗಸೂಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಚಿಂಚಲಿಯಿಂದ ಕಬ್ಬೂರ ರಸ್ತೆವರೆಗೆ ಆಯ್ದ ಭಾಗಗಳ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಸುಧಾರಣೆಯಿಂದ ವಾಹನ ಸವಾರರಿಗೆ ಅನುಕೂಲವಾಗಲಿದೆ. ರಸ್ತೆಗಳ ಅಭಿವೃದ್ಧಿ ದೇಶದ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಗುತ್ತಿಗೆದಾರರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕೆಂದು ಸೂಚಿಸಿದರು.
ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಎಇಇ ಆರ್.ಬಿ.ಮನವಡ್ಡರ, ಅಭಿಯಂತರರಾದ ಶ್ರೀಧರ ಮೇಗಲಮನಿ, ವಾಯ್.ಆರ್.ಕಾಂಬಳೆ, ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಮಹೇಶ ಕರಮಡಿ, ರಫಿಕ ತರಡೆ, ಸಂಗಣ್ಣ ದತ್ತವಾಡೆ, ಸುರೇಶ ಮಾಳಿ, ಸುಭಾಷ ಕಾಂಬಳೆ, ರೀತೀಶ ಅವಳೆ, ಶಿವು ಕೋಳಿ, ಜಯಾನಂದ ಹಿರೇಮಠ, ಕೃಷ್ಣಾ ಕುಲಗುಡೆ, ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 