ರಾಯಬಾಗ 26: ರಾಜ್ಯ ಹೆದ್ದಾರಿಗಳ ರಸ್ತೆಗಳು ಸುಧಾರಿಸುವುದರಿಂದ ಅಂತರರಾಜ್ಯ ವ್ಯಾಪಾರ ವೃದ್ಧಿಯಾಗುವುದು ಜೊತೆಗೆ ರೈತರು ಬೆಳೆದ ಬೆಳೆಗಳನ್ನು ಸಾಗಿಸಲು ಅನುಕೂಲವಾಗುವುದು ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 6 ಕೋಟಿ ರೂ. ಅನುದಾನದಲ್ಲಿ ಮಂಗಸೂಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಚಿಂಚಲಿಯಿಂದ ಕಬ್ಬೂರ ರಸ್ತೆವರೆಗೆ ಆಯ್ದ ಭಾಗಗಳ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಸುಧಾರಣೆಯಿಂದ ವಾಹನ ಸವಾರರಿಗೆ ಅನುಕೂಲವಾಗಲಿದೆ. ರಸ್ತೆಗಳ ಅಭಿವೃದ್ಧಿ ದೇಶದ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಗುತ್ತಿಗೆದಾರರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕೆಂದು ಸೂಚಿಸಿದರು.
ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಎಇಇ ಆರ್.ಬಿ.ಮನವಡ್ಡರ, ಅಭಿಯಂತರರಾದ ಶ್ರೀಧರ ಮೇಗಲಮನಿ, ವಾಯ್.ಆರ್.ಕಾಂಬಳೆ, ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಮಹೇಶ ಕರಮಡಿ, ರಫಿಕ ತರಡೆ, ಸಂಗಣ್ಣ ದತ್ತವಾಡೆ, ಸುರೇಶ ಮಾಳಿ, ಸುಭಾಷ ಕಾಂಬಳೆ, ರೀತೀಶ ಅವಳೆ, ಶಿವು ಕೋಳಿ, ಜಯಾನಂದ ಹಿರೇಮಠ, ಕೃಷ್ಣಾ ಕುಲಗುಡೆ, ಸೇರಿ ಅನೇಕರು ಇದ್ದರು.