ದೆಹಲಿ, ಭವಿಷ್ಯ ಜವಾಬ್ದಾರಿ ಎರಡೂ ಮಹಿಳೆಯರ ಮೇಲಿದೆ: ಕೇಜ್ರಿವಾಲ್
ನವದೆಹಲಿ , ಫೆ 8,ಚಳಿಯ ನಡುವೆಯೂ ದೆಹಲಿಯಲ್ಲಿ ಮತದಾನ ಬಿರುಸುಗೊಂಡಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅರ್ಹ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ, ವಿಶೇಷವಾಗಿ ಮಹಿಳೆಯರಿಗೆ ಮನವಿ ಮಾಡಿದ್ದಾರೆ.ತಪ್ಪದೇ ಮತದಾನ ಮಾಡಿ ಎಂದಿರುವ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯ, ಭವಿಷ್ಯ ಮತ್ತು ಜವಾಬ್ದಾರಿ ಎರಡೂ ನಿಮ್ಮ ಮೇಲಿದೆ ಎಂದೂ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ನಿಮ್ಮ ಮತ ಚಲಾಯಿಸಿ. ದೆಹಲಿಯ ಮಹಿಳೆಯರಲ್ಲಿ ವಿಶೇಷ ಮನವಿ- ನೀವು ನಿಮ್ಮ ಮನೆಯ ಜವಾಬ್ದಾರಿಯನ್ನು ಹೇಗೆ ಹೊರುತ್ತೀರಾ ಅದೆ ರೀತಿ ದೆಹಲಿಯ ಜವಾಬ್ದಾರಿಯನ್ನೂ ನಿಮ್ಮ ಹೆಗಲ ಮೇಲೆ ಹೊರಬೇಕು. ನಿಮ್ಮ ಮನೆಯವರೊಂದಿಗೆ ಚರ್ಚಿಸಿ, ಮನೆಯ ಪುರುಷರನ್ನು ನಿಮ್ಮ ಜೊತೆ ಮತದಾನಕ್ಕೆ ತಪ್ಪದೆ ಕರೆತನ್ನಿ ಎಂದು ಹೇಳಿದ್ದಾರೆ. 70 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದೆ. ಒಟ್ಟು 672 ಅಭ್ಯರ್ಥಿಗಳ ಭವಿಷ್ಯವನ್ನು 1.47 ಕೋಟಿ ಮತದಾರರು ನಿರ್ಧರಿಸಲಿದ್ದು, ಬರುವ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 