ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಅವಶ್ಯಕ
ಲೋಕದರ್ಶನ ವರದಿ
ಘಟಪ್ರಭಾ 27: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ ಎಂದು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಮಹಾಕಾಳಿ ಶಿಕ್ಷಣ ಸಂಸ್ಥೆಯ ಶ್ರೀ ಸಿದ್ಧರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ, ಸಚ್ಛಾರಿತ್ರ್ಯ ವಿದ್ಯಾರ್ಥಿಗಳ ಆಧಾರಸ್ಥಂಭವಾಗಿದ್ದು, ದೃಢ ಪ್ರಯತ್ನ, ಆತ್ಮವಿಶ್ವಾಸಗಳೇ ಯಶಸ್ಸಿನ ಸಾಧನೆಯಾಗಿದೆ. ಮಹಾಕಾಳಿ ಶಿಕ್ಷಣ ಸಂಸ್ಥೆಯ ಸಾಧನೆ ಆದರ್ಶಪ್ರಾಯವಾಗಿದೆ ಎಂದರು.
ಶ್ರೀ ವಿಠ್ಠಲ ದೇವರ ದೇವಋಷಿಗಳಾದ ಮುರೇಪ್ಪ ಪೂಜೇರಿ ಸಾನಿಧ್ಯ ವಹಿಸಿದ್ದರು. ಶಾಲೆಯ ಅಧ್ಯಕ್ಷ ಜ್ಯೋತ್ತೆಪ್ಪ ಬಂತಿ ಅಧ್ಯಕ್ಷತೆ ವಹಿಸಿದ್ದರು.ಮಾರುತಿ ಶಿರಗುರಿ, ಅಡಿವೆಪ್ಪ ಬೆಕ್ಕಿನವರ, ವಿಠ್ಠಲ ಪಾಟೀಲ, ರಾಮಪ್ಪ ಜೊತ್ತೇನ್ನವರ, ಪವಾಡೆಪ್ಪ ಲಗಳೇರ, ಪ್ರಧಾನ ಗುರು ಎಂ.ಆರ್.ಕಡಕೋಳ ಇದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 