ಜುಲೈ 21 ಮತ್ತು 22 ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಧಾರವಾಡ ಜಿಲ್ಲಾ ಪ್ರವಾಸ

ಜುಲೈ 21 ಮತ್ತು 22 ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಧಾರವಾಡ ಜಿಲ್ಲಾ ಪ್ರವಾಸ In-charge Minister Santosh Lad's Dharwad district tour on July 21 and 22

ಧಾರವಾಡ ಜು.19: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್‌. ಲಾಡ್ ಅವರು ಜುಲೈ 21 ಮತ್ತು 22 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  

ಜುಲೈ 21, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಯತ ಸಭಾಂಗಣದಲ್ಲಿ 2025-26 ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಯೋಜನೆ (ಕೆ.ಡಿ.ಪಿ) ಸಭೆಯನ್ನು ಜರುಗಿಸುವರು.  

ನಂತರ ಜುಲೈ 22, 2025 ರಂದು ಬೆಳಿಗ್ಗೆ 11 ಗಂಟೆಗೆ ಅಣ್ಣಿಗೇರಿ ತಾಲೂಕಿನ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಜರುಗಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.