ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನ ಕ್ವಾರಂಟೈನ್ ನಲ್ಲಿ: ಗೋವಿಂದ ಕಾರಜೋಳ
ಬೆಂಗಳೂರು, ಏ.1, ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 