ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮಾದರಿ : ಆರ್ಸಿ ಪಾಟೀಲ್
In the modern world, women are role models in all fields: RC Patil
ರಾಣೇಬೆನ್ನೂರ, ಮಾ. 09 : ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ ಅಲ್ಲಿ ನೆಮ್ಮದಿಯ ಸುಸಂಸ್ಕೃತ ವಾತಾವರಣ ಕಂಡು ಬರುತ್ತದೆ. ಈ ನಿಟ್ಟಿನಲ್ಲಿ ಸರ್ವರೂ ಮಹಿಳೆಯರನ್ನು ಪೂಜಿಸುವ ಹಾಗೂ ಗೌರವಿಸುವ ಪ್ರವೃತ್ತಿ ಹೊಂದಬೇಕು ಅಂದಾಗ ನಾವು ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆರ್ಸಿ ಪಾಟೀಲ್ ಹೇಳಿದರು. ರವಿವಾರದಂದು ಇಲ್ಲಿನ ಮಾಗೋಡ ರಸ್ತೆಯ ಹೊರವಲಯದಲ್ಲಿರುವ ಸಾರಿಗೆ ಘಟಕದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಣ್ಣು ಹೆಣ್ಣೆಂದು ಹೆಣ್ಣನ್ನು ಹಿಯಾಳಿಸದಿರಿ, ಹೆಣ್ಣಲ್ಲವೇ ನಮ್ಮನ್ನು ಹೆತ್ತ ತಾಯಿ, ಆಟೋ ಚಾಲನೆಯಿಂದ ಹಿಡಿದು ವಿಮಾನ ಚಾಲನೆಯಲ್ಲಿರುವವರೂ ಹೆಣ್ಣಲ್ಲವೇ? ಹೀಗಿರುವಾಗಇಂದಿನ ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ನಾವು ಅಬಲೆಯಲ್ಲ ಸಬಲೆ ಎಂಬುದನ್ನು ಸಾಬೀತುಪಡಿಸಿ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ ಎಂದರು. ಹಿರೇಮಾಗನೂರಿನ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಾ ಆರ್ ಪಾಟೀಲ್ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಿ ಸಂಸರಾದ ಹೊರೆ ಹೊತ್ತು ನಂತರ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುನ್ನಡೆಯುತ್ತಿರುವ ಕೆಎಸ್ ಆರ್ ಟಿಸಿ ಮಹಿಳಾ ನಿರ್ವಾಹಕಿಯರು ಮತ್ತು ಮಹಿಳಾ ಸಿಬ್ಬಂಧಿಯವರ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ ಎಂದರು. ಸಂಚಾರಿ ನೀರೀಕ್ಷಕರಾದ ನಾಗರಾಜ ಕಳಕ್ಕವರ, ಪುಷ್ಪಾ, ಸಂಚಾರಿ ನಿಯಂತ್ರಕ ರಮೇಶ ತೇಲ್ಕರ, ಆರ್ ಎನ್ ಮಾಳನಾಯಕನಹಳ್ಳಿ, ನಿಟ್ಟೂರ ಸ್ಕೂಲ್ ಶಿಕ್ಷಕಿ ಶೈಲಾಬಾನು ಜಾತಗೇರ ಸೇರಿದಂತೆ ಸಾರಿಗೆ ಸಂಸ್ಥೆಯ ನಿರ್ವಾಹಕಿಯರು ಮತ್ತು ಸಿಬ್ಬಂಧಿವರ್ಗದವರು ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 