ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಾಳೆ( ಜೂ.11)
Inauguration ceremony of new fire station building tomorrow (June 11)
ತಾಳಿಕೋಟಿ 09: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ ಠಾಣೆಯ ಉದ್ಘಾಟನಾ ಸಮಾರಂಭ ನಾಳೆ (ಜೂನ್ 11) ರಂದು ಜರುಗಲಿದೆ. ಅಂದು ಮಧ್ಯಾಹ್ನ 12-00 ಘಂಟೆಗೆ ಪಟ್ಟಣದ ಗಡಿ ಸೋಮನಾಳ ರಸ್ತೆಯಲ್ಲಿರುವ ಈ ನೂತನ ಕಟ್ಟಡವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಘನ ಉಪಸ್ಥಿತಿ ಇರುವುದು. ಮುದ್ದೇಬಿಹಾಳ ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷರಾದ ಸಿ.ಎಸ್.ನಾಡಗೌಡ(ಅಪ್ಪಾಜಿ) ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ವಿಜಯಪುರ ಸಂಸದ ರಮೇಶ ಚಂ. ಜಿಗಜಿಣಗಿ, ರಾಜ್ಯಸಭೆ ಸಂಸದೆ ಡಾ.ಸುಧಾ ಮೂರ್ತಿ,ಕ.ಕೌ.ಅ.ನಿ. ಅಧ್ಯಕ್ಷೆ ಕಾಂತಾ ನಾಯ್ಕ,ಕ.ರಾ.ಲಿಂ.ಅ.ಮಂ. ಅಧ್ಯಕ್ಷ ಬಿಎಸ್ ಕವಲಗಿ,ದೇ.ಹಿ.ಶಾಸಕ ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ಆರಿ್ನರಾಣಿ,ಸುನೀಲಗೌಡ ಬಿ.ಪಾಟೀಲ,ಪಿ.ಎಚ್.ಪೂಜಾರ, ಕೇಶವ ಪ್ರಸಾದ್ ಎಸ್ ಆಗಮಿಸುವರು. ಸ.ಅ.ಮು.ಕಾರ್ಯದರ್ಶಿ ತುಷಾರ ಗಿರಿನಾಥ, ಪೋ.ಮ.ನಿ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನ್ ನಿರ್ದೇಶಕ ಪ್ರಶಾಂತ ಕುಮಾರ ಠಾಕೂರ,
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹಾಗೂ ಕಾರ್ಯದರ್ಶಿ ವಿ.ಶರತ್ ಚಂದ್ರ,ಕ.ರಾ.ಅ.ಶಾ.ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕ ಎಂ.ನಂಜುಂಡಸ್ವಾಮಿ,ಕ.ರಾ.ಅ.ಶಾ. ತುರ್ತುಸೇವೆಗಳ ಪೊಲೀಸ್ ಉಪ ಮಹಾ ನೀರೀಕ್ಷಕರಾದ ರೇಣುಕಾ ಕೆ. ಸುಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷಬೂ ಚೌಧರಿ,ಕ.ರಾ.ಅ.ಶಾ.ತುರ್ತು ಸೇವೆಗಳ ನಿರ್ದೇಶಕ ಟಿಎನ್ ಶಿವಶಂಕರ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ಪರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿರುವರು ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹುಬ್ಬಳ್ಳಿ ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಮಂಜುನಾಥ್ ಸಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 