ಜಿಲ್ಲಾ ಪುನಶ್ಚೇತನ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಜಿಲ್ಲಾ ಪುನಶ್ಚೇತನ ತರಬೇತಿ ಕಾರ್ಯಕ್ರಮ ಉದ್ಘಾಟನೆ Inauguration of District Revitalization Training Program

ವಿಜಯಪುರ 28 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಮದ್ಯಸ್ತಿಕದಾರರಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಗೌರವಾನ್ವಿತ  ಹರೀಶ. ಎ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೇಗಳ ಪ್ರಾಧಿಕಾರ ವಿಜಯಪುರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಎಲ್ಲಾ ಮಧ್ಯಸ್ಥಿಕೆದಾರರಿಗೆ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ಮಧ್ಯಸ್ಥಿಕೆಗೆ ಬಂದ ಎಲ್ಲ ಪಕ್ಷಗಾರರಿಗೆ ಮಧ್ಯಸ್ಥಿಕೆಯ ಬಗ್ಗೆ ತಿಳುವಳಿಕೆ ಹೇಳಿ, ಮರಳಿ ಕೂಡಿಸಿ ಕಳಿಸುವ ಪ್ರಯತ್ನವನ್ನು ಮಧ್ಯಸ್ಥಿಕೆ ದರರು ಮಾಡಬೇಕು, ಮತ್ತು ಮಧ್ಯಸ್ಥಿಕೆಗೆ ಬಂದ್ ಬೇರೆ ಬೇರೆ ಸ್ವರೂಪದ ಕೇಸುಗಳಲ್ಲಿ ಸಹ ಕೇಸುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮತ್ತು ವಾದಿ ಪ್ರತಿವಾದಿಯರ ಮನವೊಲಿಸುವಲ್ಲಿ ಹೆಚ್ಚು ಶ್ರಮವಹಿಸಬೇಕು ಮತ್ತು ಮಧ್ಯಸ್ಥಿಕೆಯ ತಿಳುವಳಿಕೆ ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಮಧ್ಯಸ್ಥಿಕೆಯ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕೆಂದು ಈ ಸಂದರ್ಭದಲ್ಲಿ ಮಾತನಾಡಿದರು.  

ಅಧ್ಯಕ್ಷರಾಗಿ ಗೌರವಾನ್ವಿತ ಅರವಿಂದ ಎಸ್ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಮತ್ತು ಮುಖ್ಯ ಅತಿಥಿಗಳಾಗಿ ಡಿಜಿ ಬಿರಾದಾರ ಅಧ್ಯಕ್ಷರು ಜಿಲ್ಲಾ ನ್ಯಾಯಾಧೀಶ ಸಂಘ ವಿಜಯಪುರ, ಶಿವಾನಂದ ಮಲ್ಲನಗೌಡ ಪಾಟೀಲ್, ಅಧಿಕಾರೆತರ ಸದಸ್ಯರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಸಂಪನ್ಮೂಲ ವ್ಯಕ್ತಿಗಳಾಗಿ ಲಕ್ಷ್ಮೀಶ್ ರಾವ್ ಜಿ, ಹಿರಿಯ ತರಬೇತಿದಾರರು ಕರ್ನಾಟಕ ಮಧ್ಯಸ್ಥಿಕೆ, ಬೆಂಗಳೂರು ಮತ್ತು ಅನಿತಾ ಆರ್ . ಮಧ್ಯಸ್ಥಿಕೆದಾರರು, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು ಮತ್ತು ಬಿವುಲಾಸಿಂಗ್, ಮಧ್ಯಸಿಕೆದಾರರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕಾರ್ಯಕ್ರಮದಲ್ಲಿ ಉಪಸ್ಥರಿದ್ದರು.  ಈ ಕಾರ್ಯಕ್ರಮದಲ್ಲಿ ಡಿ.ಎಲ್‌.ಎಸ್‌.ಎ ವಿಜಯಪುರ ಖಿಐಖಅ ಮುದ್ದೇಬಿಹಾಳ, ಬಸವನ ಬಾಗೇವಾಡಿ, ಸಿಂದಗಿ ಮತ್ತು ಇಂಡಿ ಹಾಗೂ ಆಐಖಂ ಬಾಗಲಕೋಟ್ ಮತ್ತು ಎಲ್ಲ ತಾಲೂಕು ಕಾನೂನು ಸೇವಾ ಸಮಿತಿಯ ಮಧ್ಯಸ್ಥಿಕದಾರು ಭಾಗವಹಿಸಿದ್ದರು.