ಹಡಗಲಿಯಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟನೆ

ಹಡಗಲಿಯಲ್ಲಿ ವಿದ್ಯಾರ್ಥಿ ನಿಲಯ  ಉದ್ಘಾಟನೆ Inauguration of a student hostel in Hadagali

ಹೂವಿನಹಡಗಲಿ 10:   ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬಗ್ರಾಮೀಣ  ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು  ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು  ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಬಂಗಾರ​‍್ಪ ನಗರದಲ್ಲಿ ಶುಕ್ರವಾರ ಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದರು.ಭವಿಷ್ಯವಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನಿಲಯಗಳ ಅವಶ್ಯಕತೆ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು. ಇದೇ ವೇಳೆ ಸಮಾಜ ಕಲ್ಯಾಣ ಅಧಿಕಾರಿ ಆನಂದ ಡೊಳ್ಳಿನ ,ಪತ್ರಕರ್ತ ಎಂ.ಜಗದೀಶ್ ಇತರರಿದ್ದರು.