ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಉದ್ಘಾಟನೆ: ಪ್ರಾಚಾರ್ಯ ಜರಕುಂಟಿ
Inauguration of exhibition of competitive exam books: Principal Jarakunti
ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಉದ್ಘಾಟನೆ: ಪ್ರಾಚಾರ್ಯ ಜರಕುಂಟಿ
ಮುಧೋಳ, 24 : ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ.23 ರಿಂದ 30ರ ವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಗ್ರಂಥಾಲಯದ ಒಳಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಕಾರಣ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳಬೇಕೆಂದು ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಹೇಳಿದರು.
ಸ್ಪರ್ಧಾತ್ಮಕ ಪುಸ್ತಕಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್, ರೈಲ್ವೆ, ಎಸ್ಎಸ್ಸಿ, ನೆಟ್, ಕೆಎಎಸ್, ಐಎಎಸ್, ಪಿಎಸ್ಐ, ಐಪಿಎಸ್ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪುಸ್ತಕಗಳು ಪ್ರದರ್ಶನದಲ್ಲಿವೆ ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಬಳಸಿಕೊಂಡು ಸಾಮಾನ್ಯ ಜ್ಞಾನ, ಸಾಮಾನ್ಯ ಅಧ್ಯಯನ, ತಾರ್ಕಿಕತೆ, ಪ್ರಸ್ತುತ ಘಟನೆಗಳ ಮತ್ತು ವಿಷಯವಾರು ಮಾರ್ಗದರ್ಶಕ ಪುಸ್ತಕಗಳನ್ನು ಓದಿಕೊಂಡು ತಮ್ಮ ಜ್ಞಾನವನ್ನು ವೃದ್ದಿಗೊಳಿಸಿಕೊಳ್ಳಬೇಕೆಂದು ಹೇಳಿದರು.
ಗ್ರಂಥಪಾಲಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಘಟಕದ ಅಧ್ಯಕ್ಷ ಡಾ.ಚಿರಂಜೀವಿ ಎಲ್.ಎಂ ಈ ಕಾರ್ಯಕ್ರಮವನ್ನು ಸಂಯೋಜಿಸಿ, ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿವರ ಹಾಗೂ ಅವುಗಳನ್ನು ಹೇಗೆ ಉಪಯೋಗಿಸಿಕೊಳ್ಳಬೇಕೆಂಬುದರ ಕುರಿತು ಮಾರ್ಗದರ್ಶನ ನೀಡಿದರು.
ಐಕ್ಯೂಎಸಿ ಸಂಯೋಜಕ ಎ.ಆರ್.ಕಡೂರು, ಗ್ರಂಥಾಲಯ ಸಲಹಾ ಸಮಿತಿಯ ಅಧ್ಯಕ್ಷೆ ಎಸ್.ಎಸ್. ಬಿರಾದರ, ಸಹಾಯಕ ಗ್ರಂಥಪಾಲಕಿ ಎಸ್.ಎಸ್.ಕೊಣ್ಣೂರಮಠ, ಗ್ರಂಥಾಲಯದ ಸಹಾಯಕ ಬಿ.ವಿ. ಪೂಜಾರಿ, ಗ್ರಂಥಾಲಯದ ಹೆಲ್ಪರ್ ಬಿ.ಕೆ.ಕರಗುಳಿ, ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 