ಪೆ.6 ರಂದು ನೂತನ ದೇವಸ್ಥಾನ ಉದ್ಘಾಟನೆ
ಲೋಕದರ್ಶನ ವರದಿ
ಬ್ಯಾಡಗಿ16: ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಶಬರಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪ ಸ್ವಾಮಿ, ಗಣಪತಿ ಹಾಗೂಅನ್ನಪೂರ್ಣೆಶ್ವರಿ ದೇವಿಯ ದೇವಸ್ಥಾನಗಳ ಉದ್ಘಾಟನೆಯು ಫೆಬ್ರುವರಿ ತಿಂಗಳ 6 ಮತ್ತು 7 ರಂದು ಜರುಗಲಿದೆ ಎಂದು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಜಯಣ್ಣ ಶಿರೂರು ಹೇಳಿದರು.
ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ದಿ. 6 ರಂದು ಮೂರೂ ದೇವರುಗಳ ಮೆರವಣಿಗೆಯು ಬಹು ವಿಜೃಂಭಣೆಯಿಂದ ನಡೆಯಲಿದೆ. ದಿ. 7 ರಂದು ಹೋಮ, ಕಳಸಾರೋಹಣ ಹಅಾಗೂ ದೇವರ ಮೂರ್ತಿ ಗಳಿಗೆ ಪ್ರಾಣ ಪ್ರತಿಷ್ಠಾಪನೆ ಜರುಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚರ್ಚೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಮೋಹನ ಕತ್ತಿ, ಉಪಾಧ್ಯಕ್ಷ ಸುರೇಶಗೌಡ ಪಾಟೀಲ, ರಾಜು ಮೊರಗೇರಿ, ಬಸಣ್ಣ ಕಡೇಕೂಪ್ಪ, ಮಾಲತೇಶ ಅರಳಿಮಟ್ಟಿ, ವೆಂಕಟೇಶ, ಎಸ್.ಜಿ. ಮಂಜಣ್ಣ, ಎಸ್.ಎಸ್. ಹಿರೇಮಠ, ರಾಮಾಂಜನೇಯ, ಸುರೇಶ ಡಂಬಳ, ರಾಜು ಗೊಂದಿಮಲ್ಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 