ಗೊಮ್ಮಟೇಶ್ ಶಿಕ್ಷಣ ಸಂಸ್ಥೆಯ ವಾರ್ಷಿಕ್ ಕ್ರೀಡಾಸ್ಪರ್ಧೆಯ ಉದ್ಘಾಟಿನೆ
Inauguration of the annual sports competition of Gommatesh Educational Institute
ಮಾಂಜರಿ 14: ಚೀಕೂಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಗೊಮಟೇಶ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಡಾ. ಏನ್. ಎ . ಮಗದುಮ್ ಸಿ. ಬಿ. ಎಸ್.ಇ. ಶಾಲೆಯಲ್ಲಿ ಗುರುವಾರ ರಂದು ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಜರುಗಿತು.ಸಂಸ್ಥೆಯ ಖಜಾಂಚಿಗಳಾದ ಲಲಿತಾ. ಎನ್. ಮಾಗದುಮ್. ಇವರು ಧ್ವಜಾರೋಹಣ ನೆರವೇರಿಸಿ ಕ್ರೀಡಾ ಜ್ಯೋತಿಯನ್ನು ಬರಮಾಡಿಕೊಂಡರು. ನಂತರ ಮೇಜರ್ ಧ್ಯಾನಚಂದ ಹಾಗೂ ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಇಂದಿನ ಮಕ್ಕಳು ನಾಳಿನ ಯುವಕರು, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮಹತ್ತರವಾಗಿದೆ. ಆದ್ದರಿಂದ ತಾವೆಲ್ಲರು ಶ್ರದ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಮಕ್ಕಳಿಗೆ ಹೇಳಿದರು. ಈ ಸಂದರ್ಭದಲ್ಲಿ ಬಿ.ಎ .ಎಂ.ಎಸ್. ಕಾಲೇಜಿನ ಪ್ರಾಚಾರ್ಯರಾದ ಪ್ರಸನ್ನ ಸವಣೂರು, ಸಿ.ಬಿ.ಎಸ್.ಇ ಶಾಲೆಯ ಪ್ರಾಚಾರ್ಯರಾದ ಎನ್ .ಎಸ್. ನಿಡಗುಂದೆ, ಎಸ್. ಎಸ್ .ಕುಲಕರ್ಣಿ ಹಾಗೂ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ರಾಜು ಕುಂಬಾರ, ಶೇಖರ ಕಾಂಬಳೆ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದರು. ಸಹ ಶಿಕ್ಷಕರಾದ ಸಂತೋಷ ಚೌಹಾಣ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಸಹ ಶಿಕ್ಷಕರು, ಮಕ್ಕಳು, ಪಾಲಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ಟೀನಾ ಜೋಶಿ ಕಾರ್ಯಕ್ರಮ ಕಾರ್ಯಕ್ರಮವನ್ನು ನಿರೂಪಿಸಿದಳು, ನವ್ಯಾ ಲಂಗೋಟೆ ಸ್ವಾಗತಿಸಿದಳು. ವಿದ್ಯಾರ್ಥಿಯಾದ ವಿನಾಯಕ ನಾಯಕ್ ವಂದಿಸಿದನು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 