ಗೊಮ್ಮಟೇಶ್ ಶಿಕ್ಷಣ ಸಂಸ್ಥೆಯ ವಾರ್ಷಿಕ್ ಕ್ರೀಡಾಸ್ಪರ್ಧೆಯ ಉದ್ಘಾಟಿನೆ
Inauguration of the annual sports competition of Gommatesh Educational Institute
ಮಾಂಜರಿ 14: ಚೀಕೂಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಗೊಮಟೇಶ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಡಾ. ಏನ್. ಎ . ಮಗದುಮ್ ಸಿ. ಬಿ. ಎಸ್.ಇ. ಶಾಲೆಯಲ್ಲಿ ಗುರುವಾರ ರಂದು ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಜರುಗಿತು.ಸಂಸ್ಥೆಯ ಖಜಾಂಚಿಗಳಾದ ಲಲಿತಾ. ಎನ್. ಮಾಗದುಮ್. ಇವರು ಧ್ವಜಾರೋಹಣ ನೆರವೇರಿಸಿ ಕ್ರೀಡಾ ಜ್ಯೋತಿಯನ್ನು ಬರಮಾಡಿಕೊಂಡರು. ನಂತರ ಮೇಜರ್ ಧ್ಯಾನಚಂದ ಹಾಗೂ ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಇಂದಿನ ಮಕ್ಕಳು ನಾಳಿನ ಯುವಕರು, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮಹತ್ತರವಾಗಿದೆ. ಆದ್ದರಿಂದ ತಾವೆಲ್ಲರು ಶ್ರದ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಮಕ್ಕಳಿಗೆ ಹೇಳಿದರು. ಈ ಸಂದರ್ಭದಲ್ಲಿ ಬಿ.ಎ .ಎಂ.ಎಸ್. ಕಾಲೇಜಿನ ಪ್ರಾಚಾರ್ಯರಾದ ಪ್ರಸನ್ನ ಸವಣೂರು, ಸಿ.ಬಿ.ಎಸ್.ಇ ಶಾಲೆಯ ಪ್ರಾಚಾರ್ಯರಾದ ಎನ್ .ಎಸ್. ನಿಡಗುಂದೆ, ಎಸ್. ಎಸ್ .ಕುಲಕರ್ಣಿ ಹಾಗೂ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ರಾಜು ಕುಂಬಾರ, ಶೇಖರ ಕಾಂಬಳೆ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದರು. ಸಹ ಶಿಕ್ಷಕರಾದ ಸಂತೋಷ ಚೌಹಾಣ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಸಹ ಶಿಕ್ಷಕರು, ಮಕ್ಕಳು, ಪಾಲಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ಟೀನಾ ಜೋಶಿ ಕಾರ್ಯಕ್ರಮ ಕಾರ್ಯಕ್ರಮವನ್ನು ನಿರೂಪಿಸಿದಳು, ನವ್ಯಾ ಲಂಗೋಟೆ ಸ್ವಾಗತಿಸಿದಳು. ವಿದ್ಯಾರ್ಥಿಯಾದ ವಿನಾಯಕ ನಾಯಕ್ ವಂದಿಸಿದನು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 