ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮ
Inauguration program of Ashakirana Drishti Kendra
ಯರಗಟ್ಟಿ, 03 : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಜರಗಿತು. ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ"ಆಶಾಕಿರಣ ಯೋಜನೆ" ಎಂಬುದು ಕರ್ನಾಟಕ ಸರ್ಕಾರದ ಯೋಜನೆ ಯಾಗಿದ್ದು,ಬಡವರು ಮತ್ತು ಗ್ರಾಮೀಣ ಜನರಿಗೆ ಕನ್ನಡಕ ವಿತರಣೆಶಾಸ್ತ್ರಚಿಕಿತ್ಸೆ ಒಳಗೊಂಡಿದೆ. ಬಿಎಡ್ ಇಓ ಆಯ್.ಆರ್. ಗಂಜಿ ಹೇಳಿದರು.
ವೈದ್ಯಾಧಿಕಾರಿ ಡಾ ಬಿ. ಎಸ್ ಬಳ್ಳೂರ ಮಾತನಾಡಿದ ಅವರು ಕರ್ನಾಟಕದ ಕಾಯಂ ನಿವಾಸಿಗಳು ಆರ್ಥಿಕವಾಗಿ ಹಿಂದುಳಿದವರು ಮತ್ತು ಕಣ್ಣಿನ ಸಮಸ್ಯೆ ಇರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ.ಉಚಿತ ಕಣ್ಣಿನ ತಪಾಸಣೆ ಕನ್ನಡಕ ಕಾಂಟಾಕ್ಟ್ ಲೆನ್ಸ್ ಗಳು ಮತ್ತು ಶಸ್ತ್ರಚಿಕಿತ್ಸೆಗಳು ಈ ಒಂದು ಯೋಜನೆ ಅಡಿಯಲ್ಲಿ ಒದಗಿಸಲಾಗುವುದು ಎಂದುತಿಳಿಸಿದರು. ಈ ವೇಳೆ ಡಾ. ಆರ್. ಬಿ. ಯರಝರ್ವಿ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಭಾಸ್ಕರ್ ಹಿರೇಮೆತ್ರಿ, ಉಮೇಶ ಮಾಗುಂಡನವರ, ಪರಮೇಶ ಚಕ್ರಕೋಟಿ, ಪ.ಪಂ. ಸದಸ್ಯರಾದ ನಿಖಿಲ ಪಾಟೀಲ ಸಲೀಂಬೇಗ ಜಮಾದಾರ ಆರೋಗ್ಯ ಇಲಾಖೆಯ ಸಿಬ್ಬಂದಿಯವರಾದನೇತ್ರ ಅಧಿಕಾರಿ ಬಸವರಾಜ ಮಳಗಲಿ, ಎಂ.ಎನ್. ಕತ್ತಿ, ಮಂಜುನಾಥ ಸಿಂಗನ್ನವರ, ಸುನಿಲ ಕಾಶನ್ನವರ, ಮಹಾಂತೇಶ ಹಿರೇಮಠ, ಪ್ರಕಾಶ ಮಾಂಗ,ಎಸ್. ಬಿ. ಬೆಂಡಿಗೇರಿ ಆಶಾಕಾರ್ಯಕರ್ತೆಯರು ಸಾರ್ವಜನಿಕರು ಹಾಜರಿದ್ದರು.ಹೇಳಿಕೆ:
ಆಶಾ ಕಾರ್ಯಕರ್ತೆಯರು ಮನೆಯಲ್ಲಿ ಪ್ರಾಥಮಿಕ ಪರೀಕ್ಷೆ ಮಾಡಿ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದ್ವಿತೀಯ ಪರೀಕ್ಷೆ ಮಾಡಿ ಸಂಬಂಧಪಟ್ಟಂತ ಸೇವೆಯನ್ನು ನೀಡಲಾಗುವುದು. ಈ ಯೋಜನೆ ಅಡಿಯಲ್ಲಿ ಕಣ್ಣಿನ ಪೊರೆ ದೃಷ್ಟಿ ದೋಷ ಡಯಾಬಿಟಿಕ್ ರೆಟಿನೋಪತಿ ಗ್ಲಕೋಮ ಮತ್ತು ಇತರೆ ಕಣ್ಣಿನ ಸಮಸ್ಯೆಗಳನ್ನು ಗುರುತಿಸಲಾಗುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯವರು ಮತ್ತು ಆಶಾ ಕಾರ್ಯಕರ್ತೆರನ್ನು ಸಂಪರ್ಕಿಸಬಹದು.
ಡಾ. ಸುರೇಶ ಹಿತ್ತಲಮನಿನೇತ್ರ ವೈದ್ಯರು, ಯರಗಟ್ಟಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 