ಆದಾಯ ತೆರಿಗೆ: ನಿಗದಿತ ಸಮಯಕ್ಕೆ ಪಾವತಿ ಮುಖ್ಯ
ಗದಗ 23: ದೇಶದ ಪ್ರತಿಯೊಬ್ಬ ವ್ಯಕ್ತಿಯ ಆದಾಯದ ಮೇಲೆ ಕೇಂದ್ರ ಸರ್ಕಾರವು ವಿಧಿಸುವ ತೆರಿಗೆಯೇ ಆದಾಯ ತೆರಿಗೆಯಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮಾತನಾಡಿದರು.
ನಿಗದಿತ ಸಮಯದೊಳಗೆ ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸರ್ಕಾರಿ ಅಧಿಕಾರಿಗಳ, ಸಿಬ್ಬಂದಿಗಳ ವೇತನ ಪಾವತಿ ಸಂದರ್ಭದಲ್ಲಿ ಎಲ್ಲ ಹಣ ಸೆಳೆಯುವ ಅಧಿಕಾರಿಗಳಿಗೆ, ಲೆಕ್ಕಾಧಿಕಾರಿಗಳಿಗೆ, ವಿಷಯ ನಿರ್ವಾಹಕರುಗಳಿಗೆ ತಮ್ಮ ಕರ್ತವ್ಯ ನಿರ್ವಹಣೆ ಕುರಿತಂತೆ ಈ ಕಾರ್ಯಾಗಾರವು ಉಪಯುಕ್ತವಿದ್ದು ಏನಾದರೂ ಸಮಸ್ಯೆಗಳಿದ್ದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಆದಾಯ ತೆರಿಗೆ ಇಲಾಖೆಯ ಹುಬ್ಬಳ್ಳಿ ಕಚೇರಿ ಆಯೋಜಿಸಿದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಆರ್.ಬಿ. ಬಲವಡೆಯವರು ಮಾತನಾಡಿ ಸರ್ಕಾರವು ಹಲವಾರು ಅಭಿವೃದ್ಧಿ ಕಾರ್ಯ ಹಾಗೂ ಇತರ ಉದ್ದೇಶಗಳಿಗೆ ಆದಾಯ ತರುವ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತೆರಿಗೆಯನ್ನು ಸಂಗ್ರಹಿಸುತ್ತದೆ. ಆದಾಯ ತೆರಿಗೆ ಸಂಬಂಧಿಸಿದಂತೆ ಅಧಿಕಾರಿ ಹಾಗೂ ಸಿಬ್ಬಂದಿಗಳ ವೇತನದಲ್ಲಿ ಟಿಡಿಎಸ್ (ಟ್ಯಾಕ್ಸ್ ಡಿಡಕ್ಟೆಡ್ ಎಟ್ ಸೋರ್ಸ) ಕುರಿತು ಜಾಗೃತಿ ಮೂಡಿಸುವುದೇ ಈ ಕಾಯರ್ಾಗಾರದ ಉದ್ದೇಶವಾಗಿದೆ ಎಂದರು.
ಸಹಾಯಕ ತೆರಿಗೆ ಆಯುಕ್ತ ಮನೀಶ ಕಸೋಡೆಕರ್ ಟಿಡಿಎಸ್ ಸಕರ್ಾರಕ್ಕೆ ಸುಧಾರಿತ ಹಣದ ಹರಿವು ಕಲ್ಪಿಸುತ್ತದೆ ಹಾಗೂ ತೆರಿಗೆ ನಿವ್ವಳ ವಿಸ್ತರಣೆಗೆ ಸಹಾಯವಾಗುತ್ತದೆ ಎಂದು ತೆರಿಗೆ ಕಟಾವಣೆ ಕುರಿತು ವಿವರಣೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್, ಆದಾಯ ತೆರಿಗೆ ಇಲಾಖೆಯ ಪಿ.ಎಲ್. ಕುಂದಾಪುರ, ವಿವಿಧ ಇಲಾಖೆಯ ಬಟವಾಡೆ ಅಧಿಕಾರಿಗಳು, ಲೆಕ್ಕ ಅಧಿಕಾರಿಗಳು, ವ್ಯವಸ್ಥಾಪಕರು, ಲೆಕ್ಕ ವಿಷಯ ನಿರ್ವಾಹಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 