ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ : ಸಮ - ಬೆಸ ಜಾರಿ
ನವದೆಹಲಿ, ನ 4: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಅಪಾಯಕಾರಿ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಮ - ಬೆಸ ಯೋಜನೆ ಜಾರಿಗೆ ಬಂದಿದೆ. ವಾಹನ ದಟ್ಟಣೆ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ದೆಹಲಿ ಸರ್ಕಾರ ಇಂದಿನಿಂದ ಸಮ - ಬೆಸ ಯೋಜನೆಯನ್ನು ಮತ್ತೆ ಜಾರಿಗೆ ತಂದಿದೆ. ಈ ವ್ಯವಸ್ಥೆ ನ 15 ರವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಜಾರಿಯಲ್ಲಿರಲಿದೆ. ವಾಯುಮಾಲಿನ್ಯವನ್ನು ತಡೆಗಟ್ಟಲು ಕೈಗೊಂಡ ಎಲ್ಲಾ ಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ಫಲ ಕೊಡದೇ ಇರುವ ಹಿನ್ನೆಲೆಯಲ್ಲಿ ಮತ್ತೆ ಸಮ - ಬೆಸ ಯೋಜನೆ ಸೋಮವಾರದಿಂದ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಭಾನುವಾರ ನ 3 ರಂದು ವಾಯುಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿದ್ದು ದೆಹಲಿ ಒಂದು ರೀತಿಯಲ್ಲಿ ಗ್ಯಾಸ್ ಚೇಂಬರ್ ರೀತಿಯಲ್ಲಿ ಪರಿವರ್ತನೆಯಾಗಿತ್ತು, ಉಸಿರಾಟವೂ ಕಷ್ಟಕರವಾಗಿತ್ತು. ಇದರ ಪರಿಣಾಮ ಇಡೀ ದೆಹಲಿಯಲ್ಲಿ ಕತ್ತಲು ಆವರಿಸಿಕೊಂಡು ಹತ್ತಾರು ವಿಮಾನಗಳ ಹಾರಾಟ ರದ್ದುಪಡಿಸಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 