ಚಿಲಿಯಲ್ಲಿ ಹೆಚ್ಚಿದ ಅಸಹನೆ : ಬೀದಿಗಿಳಿದ ಲಕ್ಷಾಂತರ ಜನ
ಸ್ಯಾಂಟಿಯಾಗೋ, ಅ 26: ದೇಶದಲ್ಲಿ ಆಮೂಲಾಗ್ರ ಆಥರ್ಿಕ ಸುಧಾರಣೆ ಮತ್ತು ಚಿಲಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೇರಾ ಹುದ್ದೆಗೆ ರಾಜೀನಾಮೆಗೆ ಆಗ್ರಹಿಸಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ಚಿಲಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಂಕಾಂಗ್ ನಲ್ಲಿ ಸತತ ಮೂರು ತಿಂಗಳ ಕಾಲ ಲಕ್ಷಾಂತರ ಜನರು ಬೀದಿಗಿಳಿದು ನಡೆಸಿದ ಪ್ರತಿಭಟನೆ ವಿಶ್ವದ ಜನರ ಮನಸ್ಸಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇತ್ತ ಕಡೆ ಚಿಲಿಯಲ್ಲಿ ಲಕ್ಷಾಂತರ ಮಂದಿ ಕಳೆದ ಒಂದು ವಾರದಿಂದ ತಮ್ಮ ಬೇಡಿಕೆ ಈಡೇರಿಸಬೇಕೆಂದು ಸ್ಥಳೀಯ ಮತ್ತು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ದೇಶದಲ್ಲಿನ ಸಾಮಾಜಿಕ ಆಥರ್ಿಕ ಬೆಳವಣಿಗೆ ಅಯೋಮಯವಾಗಿದೆ. ಇದರ ಪರಿಣಾಮವಾಗಿ ಸಕರ್ಾರಿ ನೌಕರರು ಮತ್ತು ನಿವೃತ್ತ ನೌಕರರು ಕಡಿಮೆ ಸಂಬಳ, ಕಡಿಮೆ ಪಿಂಚಣಿ ಪಡೆಯುವಂತಹ ದಾರುಣ ಪರಿಸ್ಥಿತಿ ಎದುರಾಗಿದೆ. ಮತ್ತೊಂದೆಡೆ ಆರೋಗ್ಯ ಮತ್ತು ಶಿಕ್ಷಣ ಸೇವೆ ಜನರ ಕೈಗೆ ಎಟುಕದಂತಾಗಿದೆ. ಬಡವರು ಮತ್ತು ಶ್ರೀಮಂತರ ನಡುವೆ ಅಂತರ ಹೆಚ್ಚಾಗುತ್ತಿರುವುದು ಜನರ ಆಕ್ರೋಶಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 