ನ್ಯಾಯಾಲಯದ ಮೇಲೆ ನಂಬಿಕೆ ಹೆಚ್ಚಾಗಿದೆ: ಡಿ.ಕೆ.ಶಿವಕುಮಾರ್
ನವದೆಹಲಿ, ನ.15 : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವುದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಬಗ್ಗೆ ನಂಬಿಕೆ ಹೆಚ್ಚಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ ಮತ್ತು ಸಮಯ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದು ಹೇಳಿದ್ದೆ. ಜಾರಿ ನಿರ್ದೇಶನಾಲಯ ತನ್ನ ಪ್ರಯತ್ನ ಮಾಡುತ್ತಲೇ ಇದೆ. ಇಡೀ ರಾಜ್ಯದ ಜನತೆ ತಮಗಾಗಿ ಹರಕೆ, ಪೂಜೆ ಮಾಡಿದ್ದು, ಪೂಜಾ ಫಲ ಇವತ್ತು ವರವಾಗಿದೆ ಎಂದರು.
ಕಾನೂನು ಪ್ರಕಾರವೇ ವ್ಯವಹಾರ ಮಾಡಿಕೊಂಡು ಬಂದಿರುವುದರಿಂದ ಆತ್ಮ ಸ್ಥೈರ್ಯದಿಂದ ಹೋರಾಟ ಮಾಡುತ್ತಿದ್ದೇವೆ. ಜನರ ನಂಬಿಕೆ, ಹೋರಾಟ, ಪ್ರೀತಿಗೆ ಜಯ ಸಿಕ್ಕಿದೆ ಎಂದು ಶಿವಕುಮಾರ್ ಹೇಳಿದರು.
ಉಪ ಚುನಾವಣಾ ಪ್ರಚಾರಗಳಲ್ಲಿ ತೊಡಗಿಸಿಕೊಳ್ಳುವ ವಿಚಾರವಾಗಿ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ, ಹೈಕಮಾಂಡ್ ಸೂಚಿಸಿದಂತೆ ಕೆಲಸ ಮಾಡುತ್ತೇನೆ ಎಂದರು.
ಸದನದಲ್ಲಿ ಹೊಸಕೋಟೆ ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರಿಗೆ ಸವಾಲು ಹಾಕಿರುವ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅನರ್ಹರ ಶಾಸಕರನ್ನು ಸೋಲಿಸುವುದೇ ತಮ್ಮ ಗುರಿ ಎಂದು ಎಚ್ .ಡಿ.ಕುಮಾರಸ್ವಾಮಿ ಹೇಳಿರುವುದು ಜೆಡಿಎಸ್ ನಿರ್ಧಾರ. ಅದಕ್ಕೂ
ತಮಗೂ ಯಾವುದೇ ಸಂಬಂಧವಿಲ್ಲ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 