ನ್ಯಾಯಾಲಯದ ಮೇಲೆ ನಂಬಿಕೆ ಹೆಚ್ಚಾಗಿದೆ: ಡಿ.ಕೆ.ಶಿವಕುಮಾರ್
ನವದೆಹಲಿ, ನ.15 : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವುದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಬಗ್ಗೆ ನಂಬಿಕೆ ಹೆಚ್ಚಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ ಮತ್ತು ಸಮಯ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದು ಹೇಳಿದ್ದೆ. ಜಾರಿ ನಿರ್ದೇಶನಾಲಯ ತನ್ನ ಪ್ರಯತ್ನ ಮಾಡುತ್ತಲೇ ಇದೆ. ಇಡೀ ರಾಜ್ಯದ ಜನತೆ ತಮಗಾಗಿ ಹರಕೆ, ಪೂಜೆ ಮಾಡಿದ್ದು, ಪೂಜಾ ಫಲ ಇವತ್ತು ವರವಾಗಿದೆ ಎಂದರು.
ಕಾನೂನು ಪ್ರಕಾರವೇ ವ್ಯವಹಾರ ಮಾಡಿಕೊಂಡು ಬಂದಿರುವುದರಿಂದ ಆತ್ಮ ಸ್ಥೈರ್ಯದಿಂದ ಹೋರಾಟ ಮಾಡುತ್ತಿದ್ದೇವೆ. ಜನರ ನಂಬಿಕೆ, ಹೋರಾಟ, ಪ್ರೀತಿಗೆ ಜಯ ಸಿಕ್ಕಿದೆ ಎಂದು ಶಿವಕುಮಾರ್ ಹೇಳಿದರು.
ಉಪ ಚುನಾವಣಾ ಪ್ರಚಾರಗಳಲ್ಲಿ ತೊಡಗಿಸಿಕೊಳ್ಳುವ ವಿಚಾರವಾಗಿ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ, ಹೈಕಮಾಂಡ್ ಸೂಚಿಸಿದಂತೆ ಕೆಲಸ ಮಾಡುತ್ತೇನೆ ಎಂದರು.
ಸದನದಲ್ಲಿ ಹೊಸಕೋಟೆ ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರಿಗೆ ಸವಾಲು ಹಾಕಿರುವ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅನರ್ಹರ ಶಾಸಕರನ್ನು ಸೋಲಿಸುವುದೇ ತಮ್ಮ ಗುರಿ ಎಂದು ಎಚ್ .ಡಿ.ಕುಮಾರಸ್ವಾಮಿ ಹೇಳಿರುವುದು ಜೆಡಿಎಸ್ ನಿರ್ಧಾರ. ಅದಕ್ಕೂ
ತಮಗೂ ಯಾವುದೇ ಸಂಬಂಧವಿಲ್ಲ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 