ಸಾಮೂಹಿಕ ವಿವಾಹ ಹೆಚ್ಚು ಹೆಚ್ಚು ನಡೆಯುವುದರಿಂದ ಐಕ್ಯತೆಯ ಸಂದೇಶ ಸಿಗಲಿದೆ
Increasing number of mass marriages will send a message of unity
ಹಾನಗಲ್ 12 :ಸಾಮೂಹಿಕ ವಿವಾಹವು ಸಮಾಜದಲ್ಲಿ ಸರಳತೆ ಮತ್ತು ಸಮಾನತೆ ಸಾರುವ ಮಹತ್ವದ ಸಂಪ್ರದಾಯವಾಗಿದೆ. ಸಾಮೂಹಿಕ ವಿವಾಹ ಹೆಚ್ಚು ಹೆಚ್ಚು ನಡೆಯುವುದರಿಂದ ಐಕ್ಯತೆಯ ಸಂದೇಶ ಸಿಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಬಸವಣ್ಣ ದೇವರ ರಥೋತ್ಸವ ಹಾಗೂ ವೀರಭದ್ರೇಶ್ವರ ಗುಗ್ಗಳ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ 6 ಜೋಡಿ ನವವಧುವರರು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ಜಿಪಂ ಮಾಜಿ ಸದಸ್ಯರಾದ ಮಹದೇವಪ್ಪ ಬಾಗಸರ, ಟಾಕನಗೌಡ ಪಾಟೀಲ, ತಾಪಂ ಮಾಜಿ ಸದಸ್ಯ ಅಜ್ಜಪ್ಪ ಹಿರಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಶಿವನಾಗಪ್ಪ ಬಿಷ್ಟಣ್ಣನವರ, ಬಸವಂತಪ್ಪ ಶೇಷಗಿರಿ, ಪ್ರಕಾಶ ಬಣಕಾರ, ಸುರೇಶ ಕೊಂಡೋಜಿ, ಭರಮಣ್ಣ ಶಿವೂರ, ಬವಸರಾಜ ಗೌರಕ್ಕನವರ, ನಾಗಪ್ಪ ಮೆಳ್ಳಿಹಳ್ಳಿ, ವೀರ್ಪ ಮೆಳ್ಳಿಹಳ್ಳಿ, ಸುರೇಶ ಬಿಷ್ಟಣ್ಣನವರ, ಮಹಲಿಂಗಯ್ಯ ಹಿರೇಮಠ, ಶಿವಾನಂದಪ್ಪ ಬಣಕಾರ, ಮಲ್ಲಿಕಾರ್ಜುನ ಕಳ್ಳಿ, ಬಸನಗೌಡ ಗೋರೇಗೌಡ್ರ, ಶಾಂತಪ್ಪ ಕೊಪ್ಪದ, ಹೇಮಣ್ಣ ಅಡಿಗಣ್ಣವರ, ಮೂಕಪ್ಪ ಕೊಪ್ಪದ, ಮಾರ್ತಾಂಡಪ್ಪ ಗೋರೇಗೌಡ್ರ, ಮಾರ್ತಾಂಡ ಗೌಡರ ಸೇರಿದಂತೆ ಇನ್ನೂ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 