ರಾಜಸ್ತಾನದ ಮಾಲ್ಪುರದಲ್ಲಿ ಅನಿರ್ದಿಷ್ಟಾವಧಿ ಕರ್ಪ್ಯೂ
ಜೈಪುರ, ಅಕ್ಟೋಬರ್ 9: ಶ್ರೀರಾಮನ 'ಬರಾತ್' (ವಿವಾಹ ಮೆರವಣಿಗೆ) ಯಲ್ಲಿ ಕಲ್ಲು ತೂರಾಟ ನಡೆದು ಉದ್ವಿಗ್ನತೆ ಉಂಟಾದ ಪರಿಣಾಮ ರಾಜಸ್ಥಾನದ ಟೋಂಕ್ ಜಿಲ್ಲೆಯ ಮಾಲ್ಪುರದಲ್ಲಿ ಬುಧವಾರ ಮುಂಜಾನೆ ಅನಿರ್ದಿಷ್ಟಾವಧಿ ಕರ್ಪ್ಯೂ ವಿಧಿಸಲಾಯಿತು. ಬೆಳಗ್ಗೆ 5 ಗಂಟೆಗೆ ಜಿಲ್ಲಾಧಿಕಾರಿ ಕೆ.ಕೆ.ಶರ್ಮಾ ಅವರು ಕರ್ಪ್ಯೂ ಹೇರಿದ್ದಾರೆ. ಮಾತ್ರವಲ್ಲ ಅಕ್ಟೋಬರ್ 10ರವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ನಿನ್ನೆ, ಭಗವಾನ್ ರಾಮನ ವಿವಾಹ ಮೆರವಣಿಗೆಯಲ್ಲಿ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಮಾತ್ರವಲ್ಲ ರಾಕ್ಷಸ ರಾಜ ರಾವಣನ ಪ್ರತಿಮೆಯನ್ನು ಸುಡಲು ಈ ತಂಡ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಶಾಸಕ ಕನಹಿಯಲಾಲ್ ಅವರು ನಿನ್ನೆ ರಾತ್ರಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಪೊಲೀಸರು ಪ್ರತಿಭಟನಕಾರರನ್ನು ಚದುರಿಸಲು ಪ್ರಯತ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾವಣನ ಪ್ರತಿಕೃತಿಯನ್ನು ದಹಿಸಿತು. ಆತಂಕ ಮತ್ತು ಗೊಂದಲ ಸೃಷ್ಟಿಸಲು ಕೆಲವರು ಹಳೆಯ ಗಲಭೆಗಳ ಫೋಟೋಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಂಡಿದ್ದಾರೆ. ಆದ್ದರಿಂದ ಇಂಟರ್ನೆಟ್ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 