ರಾಜಸ್ತಾನದ ಮಾಲ್ಪುರದಲ್ಲಿ ಅನಿರ್ದಿಷ್ಟಾವಧಿ ಕರ್ಪ್ಯೂ
ಜೈಪುರ, ಅಕ್ಟೋಬರ್ 9: ಶ್ರೀರಾಮನ 'ಬರಾತ್' (ವಿವಾಹ ಮೆರವಣಿಗೆ) ಯಲ್ಲಿ ಕಲ್ಲು ತೂರಾಟ ನಡೆದು ಉದ್ವಿಗ್ನತೆ ಉಂಟಾದ ಪರಿಣಾಮ ರಾಜಸ್ಥಾನದ ಟೋಂಕ್ ಜಿಲ್ಲೆಯ ಮಾಲ್ಪುರದಲ್ಲಿ ಬುಧವಾರ ಮುಂಜಾನೆ ಅನಿರ್ದಿಷ್ಟಾವಧಿ ಕರ್ಪ್ಯೂ ವಿಧಿಸಲಾಯಿತು. ಬೆಳಗ್ಗೆ 5 ಗಂಟೆಗೆ ಜಿಲ್ಲಾಧಿಕಾರಿ ಕೆ.ಕೆ.ಶರ್ಮಾ ಅವರು ಕರ್ಪ್ಯೂ ಹೇರಿದ್ದಾರೆ. ಮಾತ್ರವಲ್ಲ ಅಕ್ಟೋಬರ್ 10ರವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ನಿನ್ನೆ, ಭಗವಾನ್ ರಾಮನ ವಿವಾಹ ಮೆರವಣಿಗೆಯಲ್ಲಿ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಮಾತ್ರವಲ್ಲ ರಾಕ್ಷಸ ರಾಜ ರಾವಣನ ಪ್ರತಿಮೆಯನ್ನು ಸುಡಲು ಈ ತಂಡ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಶಾಸಕ ಕನಹಿಯಲಾಲ್ ಅವರು ನಿನ್ನೆ ರಾತ್ರಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಪೊಲೀಸರು ಪ್ರತಿಭಟನಕಾರರನ್ನು ಚದುರಿಸಲು ಪ್ರಯತ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾವಣನ ಪ್ರತಿಕೃತಿಯನ್ನು ದಹಿಸಿತು. ಆತಂಕ ಮತ್ತು ಗೊಂದಲ ಸೃಷ್ಟಿಸಲು ಕೆಲವರು ಹಳೆಯ ಗಲಭೆಗಳ ಫೋಟೋಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಂಡಿದ್ದಾರೆ. ಆದ್ದರಿಂದ ಇಂಟರ್ನೆಟ್ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 