ರಾಜಸ್ತಾನದ ಮಾಲ್ಪುರದಲ್ಲಿ ಅನಿರ್ದಿಷ್ಟಾವಧಿ ಕರ್ಪ್ಯೂ
ಜೈಪುರ, ಅಕ್ಟೋಬರ್ 9: ಶ್ರೀರಾಮನ 'ಬರಾತ್' (ವಿವಾಹ ಮೆರವಣಿಗೆ) ಯಲ್ಲಿ ಕಲ್ಲು ತೂರಾಟ ನಡೆದು ಉದ್ವಿಗ್ನತೆ ಉಂಟಾದ ಪರಿಣಾಮ ರಾಜಸ್ಥಾನದ ಟೋಂಕ್ ಜಿಲ್ಲೆಯ ಮಾಲ್ಪುರದಲ್ಲಿ ಬುಧವಾರ ಮುಂಜಾನೆ ಅನಿರ್ದಿಷ್ಟಾವಧಿ ಕರ್ಪ್ಯೂ ವಿಧಿಸಲಾಯಿತು. ಬೆಳಗ್ಗೆ 5 ಗಂಟೆಗೆ ಜಿಲ್ಲಾಧಿಕಾರಿ ಕೆ.ಕೆ.ಶರ್ಮಾ ಅವರು ಕರ್ಪ್ಯೂ ಹೇರಿದ್ದಾರೆ. ಮಾತ್ರವಲ್ಲ ಅಕ್ಟೋಬರ್ 10ರವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ನಿನ್ನೆ, ಭಗವಾನ್ ರಾಮನ ವಿವಾಹ ಮೆರವಣಿಗೆಯಲ್ಲಿ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಮಾತ್ರವಲ್ಲ ರಾಕ್ಷಸ ರಾಜ ರಾವಣನ ಪ್ರತಿಮೆಯನ್ನು ಸುಡಲು ಈ ತಂಡ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಶಾಸಕ ಕನಹಿಯಲಾಲ್ ಅವರು ನಿನ್ನೆ ರಾತ್ರಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಪೊಲೀಸರು ಪ್ರತಿಭಟನಕಾರರನ್ನು ಚದುರಿಸಲು ಪ್ರಯತ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾವಣನ ಪ್ರತಿಕೃತಿಯನ್ನು ದಹಿಸಿತು. ಆತಂಕ ಮತ್ತು ಗೊಂದಲ ಸೃಷ್ಟಿಸಲು ಕೆಲವರು ಹಳೆಯ ಗಲಭೆಗಳ ಫೋಟೋಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಂಡಿದ್ದಾರೆ. ಆದ್ದರಿಂದ ಇಂಟರ್ನೆಟ್ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 