ರಾಯಬಾಗ 29: ಪೌರ ನೌಕರರು ತಮ್ಮ ಬೇಡಿಕೆಗಾಗಿ ಸರ್ಕಾರದ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ಸಂತೆ ದಿನದ ಕಸಕಡ್ಡಿ, ತ್ಯಾಜ್ಯ ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದರಿಂದ ಮತ್ತು ಮುಂಗಾರು ಮಳೆ ಪ್ರಾರಂಭಗೊಂಡಿದ್ದರಿಂದ ಪಟ್ಟಣದ ಪ್ರಮುಖ ಬೀದಿಗಳು ಗಬ್ಬೆದ್ದು ನಾರುತ್ತಿದ್ದು, ಸಾರ್ವಜನಿರಿಗೆ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ.