ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪೌರ ಕಾರ್ಮಿಕರ ಅನಿರ್ದಿಷ್ಟಕಾಲ ಮುಷ್ಕರ
Indefinite strike by civic workers demanding fulfillment of various demands
ಆಲಮೇಲ 03: ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರನ್ನು ರಾಜ್ಯ ಸರ್ಕಾರ ಪೂರ್ಣ ಪ್ರಮಾಣ ಸರಕಾರಿ ನೌಕರರೆಂದು ಪರಿಗಣಿಸದೇ ಹಾಗೂ ಆರೋಗ್ಯ ಸಂಜೀವಿನಿಗೆ ಮೂಲ ಕಾರಣಿಕರ್ತರಾದ ಪೌರ ಕಾರ್ಮಿಕರನ್ನು ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿರುವದು ಹಾಗೂ ಪೌರ ಕಾರ್ಮಿಕರ ವಿವಿಧ ಬೇಡಿಕೆಗೆಗಳನ್ನು ಸರ್ಕಾರ ಕೂಡಲೇ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಚಿತ್ರದುರ್ಗ, ತಾಲೂಕ ಘಟಕ ಆಲಮೇಲದ ವತಿಯಿಂದ ದಿ.5ರಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ದಿಷ್ಟಕಾಲ ಮುಷ್ಕರ ನಡೆಸಲಾಗುವದು ಎಂದು ತಾಲೂಕ ಅಧ್ಯಕ್ಷ ಲಾಲಸಾಬ ದೇವರಮನಿ ಹೇಳಿದರು.
ಬುಧುವಾರ ಪಟ್ಟಣ ಪಂಚಾಯತ ಆವರಣದಿಂದ ಪಟ್ಟಣ ಪಂಚಾಯತ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಪಟ್ಟಣದ ವಿವಿಧ ಬಡಾವಣೆಗಳ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ರಾಜ್ಯ ಸರಕಾರ ತಮ್ಮ ಬೇಡಿಕೆಗಳನ್ನು ಕಡೆಗಣಿಸಿರುವುದರಿಂದ ಅನಿರ್ದಿಷ್ಟಕಾಲ ಮುಷ್ಕರ ನಡೆಸಲಾಗುವದು ಎಂದು ಆಗ್ರಹಿಸಿ ಉಪ ತಹಶೀಲ್ದಾರ ಪಿ.ಎಸ್.ಮೂಕಿಹಾಳ ಇವರಿಗೆ ಮನವಿ ಸಲ್ಲಿಸಿದರು.
ನಂತರ ಮನವಿ ಸ್ವೀಕರಿಸಿ ಉಪ ತಹಶೀಲ್ದಾರ ಪಿ.ಎಸ್.ಮೂಕಿಹಾಳ ಮಾತನಾಡಿ ಕೂಡಲೇ ತಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸಲಾಗುವದು ಎಂದರು. ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಉಪಾಧ್ಯಕ್ಷೆ ರೇಣುಕಾ ಯಂಟಮನ,ಕಂದಾಯ ನೀರಿಕ್ಷಕ ಎಮ್.ಎ.ಗುಣಕಿ, ಆರೋಗ್ಯ ನೀರೀಕ್ಷಕಿ ತೇಜಶ್ವಿನಿ ಮಗಿ ಪಪಂ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 