ಕಬ್ಬಿಗೆ ದರ ಇತ್ಯರ್ಥ ಪಡಿಸದಿದ್ದಲ್ಲಿ ಅನಿರ್ಧಿಷ್ಟ ಹೋರಾಟ
Indefinite strike if sugarcane price not settled
ಲೋಕದರ್ಶನ ವರದಿ
ಕಬ್ಬಿಗೆ ದರ ಇತ್ಯರ್ಥ ಪಡಿಸದಿದ್ದಲ್ಲಿ ಅನಿರ್ಧಿಷ್ಟ ಹೋರಾಟ
ವಿಜಯಪುರ : 2025-26 ನೇ ಸಾಲಿನ ಕಬ್ಬಿನ ದರ ನಿಗದಿ, ರೈತರಿಗೆ ಆಗುತ್ತಿರುವ ಮೋಸದ ಕುರಿತು ಹಾಗೂ ಇನ್ನು ಅನೇಕ ವಿಷಯಗಳ ಕುರಿತು ವಾಡಿಕೆಯಂತೆ ಪ್ರತಿವರ್ಷದಂತೆ ಚರ್ಚೆ ಮಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಜಯಪುರ, ಬೆಳಗಾವಿ, ಬಾಗಲಕೋಟ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2 ಸುತ್ತಿನ ಸಭೆ ಮಾಡಿ 74 ಕಾರ್ಖಾನೆ ಮಾಲಿಕರಿಗೆ ಕಾಲಾವಕಾಶ ನೀಡಿ ನವೆಂಬರ್ 1ರ ಒಳಗಾಗಿ ಎಫ್.ಆರ್.ಪಿ ಹೊರತುಪಡಿಸಿ ಹೆಚ್ಚಿಗೆ ಸಾಧ್ಯವಾಗುವಷ್ಟು ದರ ಘೋಷಿಸುವಂತೆ ನಿರ್ಣಯಿಸಲಾಗಿತ್ತು.
ಈ ಮುಂಚೆ ಮುಖ್ಯಮಂತ್ರಿಗಳು ನವೆಂಬರ್ 1ರ ನಂತರ ಎಲ್ಲಾ ಕಾರ್ಖಾನೆಗಳು ಕಬ್ಬು ನುರಿಸಲು ಆದೇಶ ಹೊರಡಿಸಿದ್ದರು, ಇದನ್ನು ಬದಲಿಸಿ ಏಕಾಎಕಿ 10 ದಿನ ಮುಂಚೆ ಅಕ್ಟೋಬರ 20ರ ನಂತರ ಕಾರ್ಖಾನೆ ಪ್ರಾರಂಭ ಮಾಡುವಂತೆ ಮತ್ತೆ ಆದೇಶ ಹೊರಡಿಸಿ ರೈತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮತ್ತೊಮ್ಮೆ ಸಾಬೀತು ಪಡೆಸಿದ್ದಾರೆ, ಇದಕ್ಕೆ ಬೆಂಬಲವಾಗಿ ನಮ್ಮವರೇ ಆದರೂ ಕಾರ್ಖಾನೆ ಮಾಲಿಕರ ಪರವಾಗಿ ಕಬ್ಬು ಹಾಗೂ ಸಕ್ಕರೆ ಸಚಿವರು ಬೆಂಬಲಿಸಿ ಆದೇಶವನ್ನು ಹೊರಡಿಸಿದ್ದಾರೆ.
ಬೆಂಬಲಬೆಲೆ, ತೂಕದಲ್ಲಿ ಮೊಸ, ಇಳುವರಿಯಲ್ಲಿ ಮೊಸ, ಸಮಯಕ್ಕೆ ಸರಿಯಾಗಿ ಬಾಕಿ ಬಿಲ್ ಹಾಕದಿರುವುದು ಸೇರಿದಂತೆ ಹಲವಾರು ಗಂಭಿರ ವಿಷಯಗಳ ಚರ್ಚೆ ನಂತರವೇ ಕಾರ್ಖಾನೆ ಪ್ರಾರಂಭಿಸಿಬೇಕು, ಕನಿಷ್ಟ ಒಂದು ಟನ್ ಕಬ್ಬಿಗೆ ಕಟಾವು ಮತ್ತು ಸಾಗಾಣೆಯನ್ನು ಹೊರತುಪಡೆಸಿ 3500 ಆದರೂ ಕೊಡಲೇ ಬೇಕು, ಮೊದಲು ಕಬ್ಬಿನಿಂದ ಸಕ್ಕರೆ ಮಾತ್ರ ತಾಯಾರಾಗುತ್ತಿತ್ತು ಈಗ 7-8 ಉಪಉತ್ಪನ್ನಗಳು ಸಿದ್ದವಾಗಿ ಸಕ್ಕರೆ ಕಾರ್ಖಾನೆ ಮಾಲಿಕರು ಒಳ್ಳೆಯ ಲಾಭದಲ್ಲಿದ್ದು, ಇಂದಿನ ಕಾಸ್ಟ ಆಫ್ ಕಲ್ಟಿವೇಷನ ಪ್ರಕಾರ ಒಂದು ಎಕರೆ ಕಬ್ಬು ಬೆಳೆದ ರೈತ 30 ಸಾವಿರ ನಷ್ಟದಲ್ಲಿದ್ದಾನೆ, ಆದರೆ ಸರಿಯಾದ ಬೆಲೆ ಸಿಗದೇ ಕಬ್ಬು ಬೆಳೆಗಾರರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿಜಯಪುರ ಜಿಲ್ಲೆಯ ಸಮಸ್ತ ಕಬ್ಬು ಬೆಳೆಗಾರರು ಹಾಗೂ ರೈತರು ಸೇರಿಕೊಂಡು ಜಿಲ್ಲಾಧಿಕಾರಿಗಳ ಕಚೇರಿ, ಸಚಿವರಾದ ಶಿವಾನಂದ ಪಾಟೀಲರ ಮನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲರ ಮನೆ ಮುಂದೆ ಅನಿರ್ಧಿಷ್ಟ ಹೋರಾಟ ಮಾಡಲು ಸಭೆ ಸೇರಿ ನಿರ್ಣಯಿಸಲಾಗುವುದು. ಕೂಡಲೇ ಜಿಲ್ಲಾಧಿಕಾರಿಗಳು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲಿಕರು ಹಾಗೂ ರೈತ ಮುಖಂಡರೊಡನೆ ಸಭೆ ಕರೆದು ದರ ನಿಗದಿ ಪಡಿಸಬೇಕು ಇಲ್ಲವಾದಲ್ಲಿ ಮುಂದಿನ ಹೋರಾಟಕ್ಕೆ ನೇರ ಹೋಣೆಗಾರರಾಗುತ್ತಿರಿ ಎಂದು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಪತ್ರಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 