ನಾಲ್ಕನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತರ ಅನಿರ್ದಿಷ್ಟಾವಧಿ ಮುಷ್ಕರ
Indefinite strike of Asha workers entered the fourth day
ಬೆಂಗಳೂರು 10: ಮಾಸಿಕ 15,000 ರೂ.ಗಳ ನಿಗದಿತ ಗೌರವಧನ ಮತ್ತು ಇತರ ಸೌಲಭ್ಯ ನೀಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಆರೋಗ್ಯ ಸೌಧದಲ್ಲಿ ಗುರುವಾರ ಮಧ್ಯಾಹ್ನ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲಾಯಿತು.
ಒಂದೆಡೆ ಸಂಘಟನೆಯ ಸದಸ್ಯರು ಮತ್ತು ರಾಜ್ಯದ ಅಧಿಕಾರಿಗಳ ನಡುವೆ ಮಾತುಕತೆ ನಡೆಯತ್ತಿದ್ದರೂ, ಸರ್ಕಾರದ ಮನವಿಗೆ ಒಪ್ಪದ ಆಶಾ ಕಾರ್ಯಕರ್ತೆಯರು ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು, ತಿಂಗಳಿಗೆ 15 ಸಾವಿರ ರೂ. ಗೌರವಧನ ನೀಡುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಸರ್ಕಾರ ಕೂಡಲೇ ರೂ.12 ಸಾವಿರ ಗೌರವ ಧನ ನಿಗದಿಪಡಿಸಿ ಬಳಿಕ ಹಂತ ಹಂತವಾಗಿ ಮೂರು ಸಾವಿರ ರೂಪಾಯಿ ಹೆಚ್ಚಿಸಲಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮುಷ್ಕರದಿಂದಾಗಿ ಗರ್ಭಿಣಿಯರು ಬಾಣಂತಿಯರಿಗೆ ತೊಂದರೆ ಆಗುತ್ತಿದೆ. ಇದಕ್ಕೆ ಇಲಾಖೆಯೇ ಹೊಣೆ. ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ತಕ್ಕಂತೆ ವೇತನ ಸಿಗುತ್ತಿಲ್ಲ. ತಾಂತ್ರಿಕ ಸಮಸ್ಯೆಯಿಂದ ಆಶಾ ಪೋರ್ಟಲ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಿದರೂ ಅನಾರೋಗ್ಯ ಪೀಡಿತರಿಗೆ ರಜೆ ದೊರೆಯುತ್ತಿಲ್ಲ. ಇಎಸ್ಐ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 