ಹಿರೂರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
Independence Day celebrations at Hirura Government School
ತಾಳಿಕೋಟಿ 16: ತಾಲೂಕಿನ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನವನ್ನು ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ವಿದ್ಯಾರ್ಥಿಗಳ ಸಂಸ್ಕೃತಿಕ ಪ್ರದರ್ಶನಗಳು ಹೆಚ್ಚು ಗಮನ ಸೆಳೆದವು. ಇದಕ್ಕೂ ಮುನ್ನ ಮುಖ್ಯ ಭಾಷಣಕಾರರಾಗಿ ಆಗಮಿಸಿದ ದಲಿತ ಮುಖಂಡ ಡಿ.ಬಿ.ಹಾದಿಮನಿಯವರು ಮಾತನಾಡಿ ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದ ಪರಿಶ್ರಮದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಇದನ್ನು ರಕ್ಷಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ದೇಶವನ್ನು ಇನ್ನಷ್ಟು ಅಭಿವೃದ್ಧಿ ಕಡೆಗೆ ತೆಗೆದುಕೊಂಡು ಹೋಗಲು ನಾವೆಲ್ಲರೂ ಜಾತಿ ಮತ ಭೇದ ಮರೆತು ಒಂದಾಗಿ ಕೆಲಸ ಮಾಡಬೇಕಾಗಿದೆ ಎಂದರು. ಶಾಲೆಯ ಮುಖ್ಯ ಗುರುಗಳಾದ ಪಿ.ವಾಯ್.ಚಲವಾದಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಅಧ್ಯಕ್ಷ ಸಂಗನಗೌಡ ಅಸ್ಕಿ, ಉರ್ದು ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಹಾಜಿ ಮಲಂಗ ಮುಲ್ಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕ ಎಸ್ಆರ್ ಬಿರಾದಾರ ವಿದ್ಯಾರ್ಥಿಗಳ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು. ಸಹ ಶಿಕ್ಷಕಿ ಜಿಎಸ್ ಮದ್ದರಕಿ, ಶಿಕ್ಷಕ ಎನ್ ಎಸ್ ನೀರಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗಣ್ಯರಾದ ಶ್ರೀಶೈಲ ಹೊಸಮನಿ, ಮೂರ್ತುಜಾ ಮುಲ್ಲಾ, ಇಬ್ರಾಹಿಂ ಮುಲ್ಲಾ, ಭೀಮಣ್ಣ ದನ್ನೂರ, ದೇವಪ್ಪ ಕುರುಬರ, ಹಸನ್ ಸಾಬ್ ನದಾಫ, ಬಸವರಾಜ ಬಡಿಗೇರ, ಬಸವರಾಜ ದೊಡ್ಡಮನಿ, ಸುಭಾಸ ಯಾಳವಾರ,ರೇವಣಸಿದ್ದಪ್ಪ ಸೋಮನಾಳ, ಹುಲಿಗೆಪ್ಪ ಗೊಂದಲಿ, ನಾಗಪ್ಪ ಪೂಜಾರಿ, ಶಿಕ್ಷಕರಾದ ಎಸ್ ಬಿ ಹಡಪದ, ಶ್ರೀಮತಿ ಎ.ಬಿ.ಅಗ್ನಿ, ಶ್ರೀಮತಿ ಬಿ.ಎ.ಅಗ್ನಿ, ಶ್ರೀಮತಿ ಎಸ್ ಎನ್ ಹೊಸಳ್ಳಿ ಗುರುಮಾತೆ ಭಾಗವಹಿಸಿದ್ದರು. ಶಿಕ್ಷಕಿ ಬಿ.ಜಿ.ಬಿರಾದಾರ ಸ್ವಾಗತಿಸಿದರು. ಡಿ. ಎಚ್. ಎರಲಡ್ಡಿ ನಿರೂಪಿಸಿದರು.ಆರಿ್ಬ. ಮಂಗ್ಯಾಳ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 