ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಲು ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ: ಡಾ.ಜ್ಯೋತಿ ಪೂಜಾರ
Independence Day is being celebrated to commemorate the sacrifices of freedom fighters: Dr. Jyoti Po
ಸಿಂದಗಿ 16: ದೇಶವನ್ನು ಸ್ವಾತಂತ್ರ್ಯಗೊಳಿಸಲು, ತಾಯ್ನಾಡನ್ನು ರಕ್ಷಿಸಲು ಅದೆಷ್ಟೋ ವೀರ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಈ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಲು ಪ್ರತಿವರ್ಷ ಆಗಸ್ಟ್ 15 ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು. ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಚಷ್ಠಾನದ ಕ್ರೀಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಹಾಗೂ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿತಿನಿ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಸಾದನಾ ಇಮಡೆ, ಮಂಗಲಾ ಬಮ್ಮಣ್ಣಿ, ದಾನಮ್ಮ ಕೋರಿ, ಪ್ರೀಯಾ ಪವಾಡೆ, ರೇವತಿ ಬಳೂಂಡಗಿ, ಸುಶ್ಮಿತಾ ಕೋರಿ, ಸಂಚಿತಾ ಸೂರಪೂರ, ಸಿಬ್ಬಂಧಿಗಳಾದ ಅಂಬಿಕಾರಿ ಕರಿಶೆಟ್ಟಿ, ಹೇಮಾ ಬಡಿಗೇರ, ರೆಹಮತ್ತಬಿ, ಆನಂದಯ್ಯಸ್ವಾಮಿ ಹಿರೇಮಠ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಧ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸೈನಿಕರ ವೇಷಭೂಷಣದೊಂದಿಗೆ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 