10ನೇ ದಿನಕ್ಕೆ ಇಂಡಿಗೊ ಬಿಕ್ಕಟ್ಟು: ಬೆಂಗಳೂರಲ್ಲಿ 61ವಿಮಾನ ಹಾರಾಟ ರದ್ದು
IndiGo crisis enters 10th day: 61 flights cancelled in Bengaluru
ನವದೆಹಲಿ: ಇಂಡಿಗೊ ವಿಮಾನಗಳ ಸಂಚಾರದಲ್ಲಿ ಉಂಟಾಗಿರುವ ವ್ಯತ್ಯಯವು ಇಂದು (ಬುಧವಾರ) 10ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಇಲ್ಲಿಂದ ಹೊರಡಬೇಕಿದ್ದ 61 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರಿಗೆ ಬರಬೇಕಿದ್ದ 35 ಮತ್ತು ಇಲ್ಲಿಂದ ಹೊರಡಬೇಕಿದ್ದ 26 ವಿಮಾನಗಳ ಕಾರ್ಯಾಚರಣೆ ರದ್ದು ಮಾಡಲಾಗಿದೆ. ಸಹಾಯ ಕೇಂದ್ರ ಬಳಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿದೆ.
ವಿಮಾನಗಳ ಹಾರಾಟವು ಸಾಮಾನ್ಯ ಸ್ಥಿತಿಗೆ ಮರಳಿದೆ. ಸಮಸ್ಯೆಗೆ ಒಳಗಾದ ಗ್ರಾಹಕರ ಅಗತ್ಯವನ್ನೂ ಪೂರೈಸಲಾಗುತ್ತಿದೆ ಎಂದು ಇಂಡಿಗೊ ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ ಹೇಳಿದ್ದರೂ ಕೂಡ ಸಮಸ್ಯೆ ಹಾಗೆಯೇ ಮುಂದುವರಿದಿದೆ.
ವಿಮಾನಗಳ ಹಾರಾಟ ರದ್ದಾದ ಕಾರಣ ಬೆಂಗಳೂರು, ಅಹಮದಾಬಾದ್ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.
ಇಂಡಿಗೊ ವಿಮಾನಯಾನ ಸಂಸ್ಥೆಯು ತನ್ನ ಒಟ್ಟು ವಿಮಾನಗಳ ಹಾರಾಟಗಳಲ್ಲಿ ಶೇ 10ರಷ್ಟು ಹಾರಾಟವನ್ನು ಕಡಿತ ಮಾಡಬೇಕು ಎಂದು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಮಂಗಳವಾರ ಸೂಚಿಸಿದ್ದರು.
‘ಚಳಿಗಾಲದಲ್ಲಿ ಹಾರಾಟ ನಡೆಸುವ ಮಾರ್ಗಗಳಲ್ಲಿ ಶೇ 5ರಷ್ಟು ವಿಮಾನಗಳ ಹಾರಾಟವನ್ನು ಕಡಿತ ಮಾಡುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶ ನಾಲಯವು (ಡಿಜಿಸಿಎ) ಇಂಡಿಗೊ ಸಂಸ್ಥೆಗೆ ಸೋಮವಾರ ಸೂಚನೆ ನೀಡಿತ್ತು. ವಿಮಾನಗಳ ಹಾರಾಟವನ್ನು ಕಡಿತ ಮಾಡಿದ ಬಳಿಕ, ಪರಿಷ್ಕೃತ ವೇಳಾಪಟ್ಟಿಯನ್ನು ಬುಧವಾರದ (ಡಿ.10) ಒಳಗೆ ನೀಡಬೇಕು ಎಂದೂ ಹೇಳಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 