ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಭಾರತ: ರಿಷಭ್ ಪಂತ್ ಐಪಿಎಲ್ ಸಂಭಾವನೆಗಿಂತ ಕಡಿಮೆ
India, who became champions for the third time, got Rs. 20 crore cash prize
ನವದೆಹಲಿ 10: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು 4 ವಿಕೆಟ್ ಅಂತರದ ಜಯ ಸಾಧಿಸಿರುವ ಭಾರತ, ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.
ಪಂದ್ಯ ಗೆದ್ದು ಟ್ರೋಫಿ ಪಡೆದ ಭಾರತಕ್ಕೆ 2025ರ ಐಪಿಎಲ್ಗಾಗಿ ನಡೆದ ಹರಾಜಿನಲ್ಲಿ ರಿಷಭ್ ಪಂತ್ ಪಡೆದ ಸಂಭಾವನೆಗಿಂತ ಕಡಿಮೆ ಹಣ ಪ್ರಶಸ್ತಿ ರೂಪದಲ್ಲಿ ದೊರಕಿದೆ.
ಈ ಬಾರಿಯ ಐಪಿಎಲ್ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಆಯ್ಕೆಯಾಗಿರುವ ಪಂತ್ ರೂ. 27 ಕೋಟಿ ಪಡೆದಿದ್ದಾರೆ. ಆದರೆ ಚಾಂಪಿಯನ್ಸ್ ತಂಡ ಭಾರತಕ್ಕೆ ರೂ. 20 ಕೋಟಿ ನಗದು ಬಹುಮಾನ ದೊರಕಿದೆ.
ಮತ್ತೊಂದೆಡೆ, ಪಂದ್ಯದಲ್ಲಿ ಎರಡನೇ ಸ್ಥಾನ ಪಡೆದ ನ್ಯೂಜಿಲೆಂಡ್ ತಂಡಕ್ಕೆ ರೂ. 9.72 ಕೋಟಿ ರೂ. ಬಹುಮಾನ ನೀಡಲಾಗಿದೆ.
ದುಬೈನಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 251 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್ಗೆ 254 ರನ್ ಗಳಿಸಿ ಜಯ ಸಾಧಿಸಿತ್ತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 