ಶೃಂಗಸಭೆಯಿಂದ ಭಾರತ-ಚೀನಾ ಸಂಬಂಧವೃದ್ಧಿ: ಪ್ರಧಾನಿ ಮೋದಿ
ಚೆನ್ನೈ, ಅ 11: ಚೀನಾ ಹಾಗೂ ಭಾರತದ ನಡುವಿನ ಎರಡು ದಿನಗಳ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚೆನ್ನೈಗೆ ಆಗಮಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಶೃಂಗಸಭೆಯು ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲಿದೆ. ಚೀನಾ ಅಧ್ಯಕ್ಷರ ಆತಿಥ್ಯವನ್ನು ತಮಿಳುನಾಡು ವಹಿಸಿಕೊಂಡಿರುವುದು ಸಂತೋಷ ಎಂದರು.
ಚೆನ್ನೈನಿಂದ ಸುಮಾರು 55 ಕಿಮೀ ದೂರದಲ್ಲಿರುವ ಮಹಾಬಲಿಪುರಂನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ ಭಾಗವಹಿಸಲಿದ್ದಾರೆ.
ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಸ್ವಾಗತಿಸಿದರು. ಈ ವೇಳೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಉಪಮುಖ್ಯಮಂತ್ರಿಒ ಪನ್ನೀರ್ಸೆಲ್ವಂ, ಮಂತ್ರಿಗಳಾದ ಪಿ.ತಂಗಮಣಿ ಮತ್ತಿತರರು ಹಾಜರಿದ್ದರು.
ಆನಂತರ ಹೆಲಿಕಾಪ್ಟರ್ ಮೂಲಕ ತಿರುವಿತಾಂತೈಗೆ ತಲುಪಿದ ಪ್ರಧಾನಿ, ಮಹಾಬಲಿಪುರಂನ ವಿಶ್ವ ಯುನೆಸ್ಕೋ ಪರಂಪರೆಯ ತಾಣವನ್ನು ಬಿಗಿ ಭದ್ರತೆಯ ನಡುವೆ ರಸ್ತೆ ಮಾರ್ಗವಾಗಿ ತಲುಪಿದರು
ಹೆಲಿಪ್ಯಾಡ್ನಲ್ಲಿ ಅವರನ್ನು ಬಿಜೆಪಿಯ ಹಿರಿಯ ಮುಖಂಡರು ಮತ್ತು ಸಚಿವರು ಸ್ವಾಗತಿಸಿದರು.
ಸಂಜೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಕ್ಸಿ ಜಿನ್ ಪಿಂಗ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಳ್ಳಲಿದ್ದಾರೆ. ನಂತರ ಉಭಯ ಮುಖಂಡರು ಶೋರ್ ದೇವಾಲಯ, ಅಜರ್ುನ ತಪಸ್ಸು ಮಾಡಿದ ಸ್ಥಳ ಹಾಗೂ ಪಂಚರಥಗಳ ದರ್ಶನ ಪಡೆಯಲಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 