ಭಾರತ, ಚೈನಾ ನಡುವಣ ಮಾತುಕತೆ ಬಹಿರಂಗವಾಗಲಿ: ಒವೈಸಿ ಆಗ್ರಹ
ಹೈದರಾಬಾದ್, ಜೂನ್ ೮, ಭಾರತ ಸೇನಾ ಪ್ರತಿನಿಧಿಗಳು, ಚೈನಾ ಪ್ರತಿನಿಧಿಗಳ ನಡುವೆ ನಡೆದ ಮಾತುಕತೆಯಲ್ಲಿ ಏನು ಚರ್ಚೆ ನಡೆದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳಲು ಅದನ್ನು ಬಹಿರಂಗಪಡಿಸಬೇಕು ಎಂದು ಸಂಸದ, ಎಂ ಐ ಎಂ ಅಧ್ಯಕ್ಷ ಅಸದುದ್ದೀನ್ ಒವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ವಿಷಯದಲ್ಲಿ ಕೇಂದ್ರ ಸರ್ಕಾರ ಏಕೆ ? ಮೌನವಾಗಿದೆ ಎಂಬುದನ್ನೂ ಸಹ ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ. ಲಡಾಖ್ ನಲ್ಲಿ ಭಾರತದ ಭೂ ಭಾಗವನ್ನು ಚೈನಾ ಸೇನೆ ಅತಿಕ್ರಮಿಸಿದೆಯೋ, ಇಲ್ಲವೋ ಎಂಬುದನ್ನು ಕೇಂದ್ರ ಸರ್ಕಾರ ಮೊದಲು ಸ್ಪಷ್ಟಪಡಿಸಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ.ಲಡಾಖ್ ಗಡಿಯಲ್ಲಿರುವ ನಿಯಂತ್ರಣ ರೇಖೆ ಬಳಿ ಭಾರತ, ಚೈನಾ ಗಡಿ ವಿವಾದ ಸೃಷ್ಟಿಯಾಗಿದೆ, ವಿವಾದ ಪರಿಹರಿಸಲು ಉಭಯ ದೇಶಗಳ ಸೇನಾ ಮಟ್ಟದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 