ಭಾರತ-ಪಾಕಿಸ್ತಾನ ಕದನ ವಿರಾಮ: ಆದಮ್ಪುರ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
India-Pakistan ceasefire: Prime Minister Narendra Modi visits Adampur air base
ನವದೆಹಲಿ 13: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್ನ ಆದಮ್ಪುರ ವಾಯುನೆಲೆಗೆ ಭೇಟಿ ನೀಡಿದ್ದು, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಯೋಧರು ಸದ್ಯದ ಸ್ಥಿತಿಯ ಬಗ್ಗೆ ವಿವರಿಸಿದರು.
ಭೇಟಿಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಯೋಧರೊಂದಿಗಿನ ಫೋಟೊಗಳನ್ನು ಮೋದಿ ಹಂಚಿಕೊಂಡಿದ್ದಾರೆ.
‘ಇಂದು ಬೆಳಿಗ್ಗೆ, ನಾನು ಆದಮ್ಪುರಕ್ಕೆ ಹೋಗಿ ನಮ್ಮ ವೀರ ಯೋಧರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ಭಾರತಕ್ಕಾಗಿ ಮಾಡುವ ಪ್ರತಿ ಕೆಲಸಕ್ಕೂ ಇಡೀ ದೇಶ ಕೃತಜ್ಞವಾಗಿರುತ್ತದೆ’ ಎಂದು ಮೋದಿ ಬರೆದುಕೊಂಡಿದ್ದಾರೆ.
ಪಂಜಾಬ್ ನ ಆದಂಪುರ್ ಭಾರತೀಯ ವಾಯುಪಡೆ ನೆಲೆಯ ರನ್ ವೇಯನ್ನು ಧ್ವಂಸಗೊಳಿಸಿದ್ದೇವೆ ಎಂಬ ಪಾಕ್ ಆರೋಪ ಸುಳ್ಳು ಎಂಬುದು ಬಯಲಾಗಿದೆ. ಆದಂಪುರ್ ನೆಲೆಯಲ್ಲಿರುವ ಯುದ್ಧ ವಿಮಾನಗಳನ್ನು ಹಾಗೂ ರಾಡಾರ್ ನೆಲೆಯನ್ನು ಧ್ವಂಸಗೊಳಿಸಿರುವುದಾಗಿ ಪಾಕ್ ತಿಳಿಸಿತ್ತು. ಅಷ್ಟೇ ಅಲ್ಲ ತಮ್ಮ ದಾಳಿಯಲ್ಲಿ 60 ಮಂದಿ ಭಾರತೀಯ ಸೈನಿಕರು ಸಾವ*ನ್ನಪ್ಪಿರುವುದಾಗಿ ಹೇಳಿತ್ತು. ಆದರೆ ಈ ಎಲ್ಲಾ ಮಾಹಿತಿಯು ಸುಳ್ಳು ಎಂಬುದು ಜಗತ್ತಿಗೆ ಗೊತ್ತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯೋಧರ ಜತೆಗಿನ ಚರ್ಚೆ ವೇಳೆ ತಿಳಿಸಿದ್ದಾರೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 