ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ: ಎಲ್ ಕೃಷ್ಣನಾಯಕ

ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ: ಎಲ್ ಕೃಷ್ಣನಾಯಕ  India is a great democracy: L Krishnanayak

ಹೂವಿನ ಹಡಗಲಿ 26: ವಿಶ್ವದಲ್ಲಿಯೇ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಶಾಸಕ ಎಲ್ ಕೃಷ್ಣನಾಯಕ ಅಭಿಮತ ವ್ಯಕ್ತಪಡಿಸಿದರು. 

ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರೆ​‍್ಣ ಮಾಡಿ ಗೌರವ ಸಲ್ಲಿಸಿದರು.ಬುಧವಾರ ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದನವೆಂಬರ್ 26ಸಂವಿಧಾನ ಅಂಗೀಕಾರ ದಿನದ ಅಂಗವಾಗಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜನ ಸಾಮಾನ್ಯರ ಬದುಕು ಹಸನಾಗಲು ಡಾ ಬಿ ಆರ್ ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರಿಗೂ ಮತದಾನ ಹಕ್ಕು ಇದೆ ಎಂದರು.ತಹಶೀಲ್ದಾರ್ ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಆನಂದ್ ಡೊಳ್ಳಿನ, ಬಿ ಇ ಒ ಮಹೇಶ್ ಪೂಜಾರ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ, ಜಿ ಪಿ ಜಿ ಕಾಲೇಜು ಪ್ರಾಂಶುಪಾಲ ಕೋರಿ ಹಾಲೇಶ್, ಕವಿ ಶಂಕರ್, ಬೆಟಗೇರಿ ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ ಶಿಕ್ಷಣ ಸಂಯೋಜಕರು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.  

ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.ಅಂಬೇಡ್ಕರ್ ವೃತ್ತದಿಂದ ನಡೆದ ಜಾಥಾಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಮೂಲಕ ಸಂಚರಿಸಿತು.ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ನಂತರದಹಾಸ್ಟೆಲ್ ವಿದ್ಯಾರ್ಥಿಗಳುಜಾಥಾದಲ್ಲಿ ಭಾಗವಹಿಸಿದ್ದರು.