ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಭಾರತ ತಿರುಗೇಟು
ನವದೆಹಲಿ, ಅ 5: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಂತಾರಾಷ್ಟ್ರೀಯ ಸಂಬಂಧಗಳನ್ನು ಯಾವ ರೀತಿ ಕಾಪಾಡಬೇಕು ಮತ್ತು ಯಾವ ರೀತಿ ಉಳಿಸಿಕೊಳ್ಳಬೇಕು ಎಂಬುದು ಗೊತ್ತೇ ಇಲ್ಲ ಎಂದು ಭಾರತದ ತಿರುಗೇಟು ನೀಡಿದೆ.
ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದು, ಇಮ್ರಾನ್ ಖಾನ್ ಅವರ ಅವಿವೇಕತನಕ್ಕೆ ಸಾಕ್ಷಿಯಾಗಿದೆ. ಭಾರತದ ವಿರುದ್ಧ ಅವರು ಜಿಹಾದ್ಗೆ ಕರೆ ನೀಡಿರುವುದು ಸರಿಯಲ್ಲ, ಅದು ವಿವೇಕತನದ ನಿರ್ಧಾರವೂ ಅಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಇದೇ ಸಭೆಯಲ್ಲಿ ಕಾಶ್ಮೀರದ ವಿಚಾರ ಪ್ರಸ್ತಾಪ ಮಾಡಿದ ಮಲೇಷ್ಯಾ ಹಾಗೂ ಟರ್ಕ್ ದೇಶಗಳ ನೀತಿಯನ್ನು ಅವರು ತರಾಟೆಗೆ ತೆಗೆದುಕೊಂಡರು. ಭಾರತದ ಜತೆಗಿನ ಸ್ನೇಹ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಮಲೇಷ್ಯಾ ಹಾಗೂ ಟರ್ಕ್ ಮಾತನಾಡಬೇಕಿತ್ತು. ಕಾಶ್ಮೀರ ವಿವಾದ ಸಂಪೂರ್ಣ ಭಾರತದ ಆಂತರಿಕ ವಿಚಾರ ಎಂಬುದನ್ನು ಆ ದೇಶಗಳು ಅರಿಯಬೇಕಿತ್ತು ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370 ವಿಧಿ ರದ್ದು ಮಾಡಿದ್ದನ್ನು ಕೂಡಲೇ ವಾಸಪ್ ಪಡೆಯಬೇಕೆಂದು ಪಾಕಿಸ್ತಾನ ವಿಶ್ವಸಂಸ್ಥೆಯ ಸಭೆಯಲ್ಲಿ ಒತ್ತಾಯ ಮಾಡಿತ್ತು .
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 