ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಭಾರತ ತಿರುಗೇಟು
ನವದೆಹಲಿ, ಅ 5: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಂತಾರಾಷ್ಟ್ರೀಯ ಸಂಬಂಧಗಳನ್ನು ಯಾವ ರೀತಿ ಕಾಪಾಡಬೇಕು ಮತ್ತು ಯಾವ ರೀತಿ ಉಳಿಸಿಕೊಳ್ಳಬೇಕು ಎಂಬುದು ಗೊತ್ತೇ ಇಲ್ಲ ಎಂದು ಭಾರತದ ತಿರುಗೇಟು ನೀಡಿದೆ.
ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದು, ಇಮ್ರಾನ್ ಖಾನ್ ಅವರ ಅವಿವೇಕತನಕ್ಕೆ ಸಾಕ್ಷಿಯಾಗಿದೆ. ಭಾರತದ ವಿರುದ್ಧ ಅವರು ಜಿಹಾದ್ಗೆ ಕರೆ ನೀಡಿರುವುದು ಸರಿಯಲ್ಲ, ಅದು ವಿವೇಕತನದ ನಿರ್ಧಾರವೂ ಅಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಇದೇ ಸಭೆಯಲ್ಲಿ ಕಾಶ್ಮೀರದ ವಿಚಾರ ಪ್ರಸ್ತಾಪ ಮಾಡಿದ ಮಲೇಷ್ಯಾ ಹಾಗೂ ಟರ್ಕ್ ದೇಶಗಳ ನೀತಿಯನ್ನು ಅವರು ತರಾಟೆಗೆ ತೆಗೆದುಕೊಂಡರು. ಭಾರತದ ಜತೆಗಿನ ಸ್ನೇಹ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಮಲೇಷ್ಯಾ ಹಾಗೂ ಟರ್ಕ್ ಮಾತನಾಡಬೇಕಿತ್ತು. ಕಾಶ್ಮೀರ ವಿವಾದ ಸಂಪೂರ್ಣ ಭಾರತದ ಆಂತರಿಕ ವಿಚಾರ ಎಂಬುದನ್ನು ಆ ದೇಶಗಳು ಅರಿಯಬೇಕಿತ್ತು ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370 ವಿಧಿ ರದ್ದು ಮಾಡಿದ್ದನ್ನು ಕೂಡಲೇ ವಾಸಪ್ ಪಡೆಯಬೇಕೆಂದು ಪಾಕಿಸ್ತಾನ ವಿಶ್ವಸಂಸ್ಥೆಯ ಸಭೆಯಲ್ಲಿ ಒತ್ತಾಯ ಮಾಡಿತ್ತು .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 