ರಫೇಲ್ ಒಪ್ಪಂದದಿಂದ ಭಾರತಕ್ಕೆ ಅಭೂತಪೂರ್ವ ಯುದ್ಧ ಸಾಮಥ್ರ್ಯ: ಭಾರತೀಯ ವಾಯುಸೇನೆ
ನವದೆಹಲಿ 05: ರಫೇಲ್ ಅದ್ಭುತ ಯುದ್ಧವಿಮಾನವಾಗಿದ್ದು, ಇದು, ಭಾರತಕ್ಕೆ ಅಭೂತಪೂರ್ವ ಯುದ್ಧ ಸಾಮಥ್ರ್ಯವನ್ನು ನೀಡುತ್ತದೆ ಎಂದು ಭಾರತೀಯ ವಾಯುಸೇನೆ ಬುಧವಾರ ಹೇಳಿದೆ.
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸಾಕಷ್ಟು ವಿವಾದಗಳು ಎದ್ದಿದ್ದು, ವಿರೋಧ ಪಕ್ಷಗಳು ಆಡಳಿತಾರೂಢ ಎನ್ಡಿಎ ಸಕರ್ಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿವೆ.
ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಭಾರತೀಯ ವಾಯುಸೇನೆ ಉಪಾಧ್ಯಕ್ಷ ಮಾರ್ಷಲ್ ಎಸ್.ಬಿ.ಡಿಯೋ ಅವರು, ರಫೇಲ್ ವಿಮಾನ ಅದ್ಭುತ ಯುದ್ಧ ವಿಮಾನವಾಗಿದ್ದು, ಇದು ಭಾರತಕ್ಕೆ ಅಭೂತಪೂರ್ವ ಯುದ್ಧ ಸಾಮಥ್ರ್ಯವನ್ನು ನೀಡುತ್ತದೆ. ಪ್ರಸ್ತುತ ರಫೇಲ್ ಒಪ್ಪಂದ ಕುರಿತು ಟೀಕೆ ಮಾಡುತ್ತಿರುವವರು ಆಳದಲ್ಲಿ ನಿಂತು ಅದರ ನಿಮಯ ಹಾಗೂ ಸಂಗ್ರಹಣ ವಿಧಾನಗಳ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಫೇಲ್ ಅದ್ಭುತ ಯುದ್ಧವಿಮಾನವಾಗಿದ್ದು, ಸಾಕಷ್ಟು ಸಾಮಥ್ರ್ಯವನ್ನು ಹೊಂದಿದೆ. ವಿಮಾನದಲ್ಲಿ ಹಾರಾಟ ನಡೆಸಲು ಕಾಯುತ್ತಿದ್ದೇವೆಂದು ತಿಳಿಸಿದ್ದಾರೆ.
2018ರ ಸೆಪ್ಟೆಂಬರ್ ತಿಂಗಳಿನಲ್ಲಿ ವಿಮಾನ ಭಾರತಕ್ಕೆ ಬರಲಿದೆ ಎಂದು ಹೇಳಲಾಗುತ್ತಿತ್ತು. ಈ ನಡುವೆ ಕಾಂಗ್ರೆಸ್ ಒಪ್ಪಂದ ಕುರಿತಂತೆ ಕೇಂದ್ರ ಸಕರ್ಾರವನ್ನು ಪ್ರಶಅನೆ ಮಾಡುತ್ತಿದೆ. ವಿಮಾನ ಖರೀದಿಯಲ್ಲಿ ಕೇಂದ್ರ ಸಕರ್ಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದೆ. ಆದರೆ, ಈ ಆರೋಪವನ್ನು ಸಕರ್ಾರ ತಿರಸ್ಕರಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 