ಇಂಡಿಯನ್ ಕಾಫಿ ಹೌಸ್ ಕಾಫಿಯೊಂದಿಗೆ ಮಮತಾ ಜತೆ ಸಭೆ ನಡೆಸಬೇಕು: ರಾಜ್ಯಪಾಲರ ಬಯಕೆ
ಕೋಲ್ಕತಾ, 10 ,ಇಂಡಿಯನ್ ಕಾಫಿ ಹೌಸ್ ಸರಬರಾಜು ಮಾಡುವ ಕಾಫಿ ಗುಟುಕರಿಸುತ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಡನೆ ಎಲ್ಲಿ ಬೇಕಾದರೂ ಸಭೆ ನಡೆಸಲು ಸಿದ್ಧ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಸಭೆ ಹೇಳಿಕೊಂಡಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ರಾಜ್ಯಪಾಲರು “ಕೋಲ್ಕತಾದ ಪ್ರಖ್ಯಾತ ಇಂಡಿಯನ್ ಕಾಫಿ ಹೌಸ್ನಲ್ಲಿ ರಕ್ತದಾನಿ ಸಂಘಟಕರು ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದೆ. ಅಲ್ಲಿ ಕಾಫಿ ಕುಡಿದ ಕ್ಷಣಗಳನ್ನು ಮರೆಯುವಂತಿಲ್ಲ” ಎಂದಿದ್ದಾರೆ. ಅಲ್ಲದೆ, “ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಡನೆ ಯಾವುದೇ ಸ್ಥಳದಲ್ಲಾದರೂ ಸಭೆ ಆಯೋಜಿಸಿ. ಇಂಡಿಯನ್ ಕಾಫಿ ಹೌಸ್ ಪೂರೈಸಿದ ಕಾಫಿಯೊಂದಿಗೆ ಮಾತುಕತೆ ನಡೆಸಲು ಸಿದ್ಧ” ಎಂದು ಹೇಳಿದ್ದಾರೆ. “ನಾನು ಪತ್ನಿಯೊಡನೆ ಇಂಡಿಯನ್ ಕಾಫಿ ಹೌಸ್ನ ಮೊದಲ ಮಹಡಿಯಲ್ಲಿ ಸ್ವಾಧಭರಿತ ಕಾಫಿ ಗುಟುಕರಿಸಿದ್ದೇನೆ. ಇಲ್ಲಿಗೆ ಕಾಫಿ ಪ್ರಿಯರು ಆಗಮಿಸಿ ಆನಂದಿಸಬಹುದು” ಎಂದೂ ಸಹ ರಾಜ್ಯಪಾಲ ಜಗದೀಪ್ ದಂಖರ್ ಟ್ವೀಟ್ ಮಾಡಿದ್ದಾರೆ.
-
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 