ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿವೆ- ರವೀಂದ್ರ
Indian culture has its own unique conceptual statuses - Ravindra
ರಾಣಿಬೆನ್ನೂರ:26 ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿದ್ದು, ಈ ನಿಟ್ಟಿನಲ್ಲಿ ಭಾರತೀಯ ಸನಾತನ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಪ್ರಾಚಾರ್ಯ ರವೀಂದ್ರ ಕರ್ಜಗಿ ಹೇಳಿದರು.
ಬುಧವಾರ ಇಲ್ಲಿನ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ಸಹಯೋಗದಲ್ಲಿ ನಡೆದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಯುಗವಾಗಿರುವ ಇಂದಿನ ಮಕ್ಕಳಿಗೆ ಭಾರತದ ಭವ್ಯ ಇತಿಹಾಸ, ಪರಂಪರೆ, ಉಡುಗೆ ತೊಡುಗೆ ಹಾಗೂ ಸಂಸ್ಕಾರ, ಸಂಸ್ಕೃತಿಗಳ ಬಗ್ಗೆ ಜಾಗೃತಿ ಮೂಡಸಬೇಕಿದೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊಽ ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊಽ ಕೃಷ್ಣ ಎಲ್. ಹೆಚ್, ಪ್ರೊಽ ರತ್ನವ್ವ ಹಾದಿಮನಿ, ಸಾವಿತ್ರಾ, ವಿದ್ಯಾ ಪ್ಯಾಟಿಮನಿ, ಪ್ರೊಽ ನಾಗರಾಜ ಗವಿಯಪ್ಪನವರ, ಪ್ರೊಽ ಶೋಭಾ ದೊಡ್ಡನಾಗಳ್ಳಿ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 