ಇಂದಿರಾ ಕ್ಯಾಂಟೀನ್ ಆಹಾರ ಸ್ಥಗಿತ: ಸಿದ್ದರಾಮಯ್ಯ ಅವರೊಂದಿಗೆ ಯಡಿಯೂರಪ್ಪ ಮಾತುಕತೆ
ಬೆಂಗಳೂರು, ಏ.6,ಇಂದಿರಾ ಕ್ಯಾಂಟೀನ್ ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಇಂದು ಮಾತುಕತೆ ನಡೆಸಿದರು.ಊಟ, ತಿಂಡಿ ನಿಲ್ಲಿಸಿರುವ ಕುರಿತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ದೂರವಾಣಿ ಕರೆ ಮಾಡಿ, ಊಟ, ತಿಂಡಿ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಿರುವುದಾಗಿ ತಿಳಿಸಿದರು.
ದುರುಪಯೋಗವಾಗದಂತೆ ಊಟ, ತಿಂಡಿಯನ್ನು ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತವಾಗಿ ನೀಡಿ. ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಮಾತುಕತೆ ವೇಳೆ ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಲಾಕ್ ಡೌನ್ ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 