ನಿಗದಿತ ಸಮಯ ಹಾಗೂ ಸ್ಥಳದಲ್ಲಿ ಭಾರತ-ಬಾಂಗ್ಲಾ ಪಂದ್ಯ: ಗಂಗೂಲಿ
ನವದೆಹಲಿ, ಅ. 31: ಭಾರತ ಹಾಗೂ ಬಾಂಗ್ಲಾದೇಶ ನಡುವೆ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ
ಮೊದಲ ಟಿ -20 ಪಂದ್ಯ ನಿಗದಿತ ವೇಳೆಗೆ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)
ಸೌರವ್ ಗಂಗೂಲಿ ಗುರುವಾರ ತಿಳಿಸಿದ್ದಾರೆ.
ದೆಹಲಿಯ ದೀಪಾವಳಿಯ ನಂತರ, ಮಾಲಿನ್ಯವು ಅಪಾಯಕಾರಿ ಮಟ್ಟ ತಲುಪಿದೆ, ಇದರಿಂದಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಅದೇ ಸಮಯದಲ್ಲಿ ದೆಹಲಿ ಜನ ಸಹ ಕಣ್ಣಿನ ತೊಂದರೆ ಬಗ್ಗೆ ದೂರು ನೀಡುತ್ತಿದ್ದಾರೆ, ಈ ಕಾರಣದಿಂದಾಗಿ ವೈದ್ಯರು ಸಹ ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ.
"ಖಂಡಿತವಾಗಿಯೂ ಮೊದಲ ಟಿ -20 ವೇಳಾಪಟ್ಟಿಯಂತೆ ಇರುತ್ತದೆ" ಎಂದು ಗಂಗೂಲಿ ಹೇಳಿದ್ದಾರೆ. ಕಳೆದ ವರ್ಷ, ಇದೇ ಋತುವಿನಲ್ಲಿ ದೆಹಲಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯವು ಶ್ರೀಲಂಕಾ ತಂಡದ ಆಟಗಾರರು ಮೈದಾನದಲ್ಲಿದ್ದಾಗ ಮಾಲಿನ್ಯದಿಂದಾಗಿ ಸುದ್ದಿಯಲ್ಲಿತ್ತು. ಅಲ್ಲದೆ ಪ್ರವಾಸಿ ತಂಡದ ಆಟಗಾರರು ಮಾಸ್ಕ್ ಧರಿಸಿ ಅಂಗಳಕ್ಕೆ ಇಳಿದಿದ್ದರು. ಈ ವರ್ಷವೂ ಅಷ್ಟೇ ಹೊಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಪಂದ್ಯವನ್ನು ಬೇರೆ ಸ್ಥಳಕ್ಕೆ ವರ್ಗಾಯಿಸುವಂತೆ ಮನವಿ ಮಾಡಿಕೊಂಡಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 