ನಿಗದಿತ ಸಮಯ ಹಾಗೂ ಸ್ಥಳದಲ್ಲಿ ಭಾರತ-ಬಾಂಗ್ಲಾ ಪಂದ್ಯ: ಗಂಗೂಲಿ
ನವದೆಹಲಿ, ಅ. 31: ಭಾರತ ಹಾಗೂ ಬಾಂಗ್ಲಾದೇಶ ನಡುವೆ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ
ಮೊದಲ ಟಿ -20 ಪಂದ್ಯ ನಿಗದಿತ ವೇಳೆಗೆ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)
ಸೌರವ್ ಗಂಗೂಲಿ ಗುರುವಾರ ತಿಳಿಸಿದ್ದಾರೆ.
ದೆಹಲಿಯ ದೀಪಾವಳಿಯ ನಂತರ, ಮಾಲಿನ್ಯವು ಅಪಾಯಕಾರಿ ಮಟ್ಟ ತಲುಪಿದೆ, ಇದರಿಂದಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಅದೇ ಸಮಯದಲ್ಲಿ ದೆಹಲಿ ಜನ ಸಹ ಕಣ್ಣಿನ ತೊಂದರೆ ಬಗ್ಗೆ ದೂರು ನೀಡುತ್ತಿದ್ದಾರೆ, ಈ ಕಾರಣದಿಂದಾಗಿ ವೈದ್ಯರು ಸಹ ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ.
"ಖಂಡಿತವಾಗಿಯೂ ಮೊದಲ ಟಿ -20 ವೇಳಾಪಟ್ಟಿಯಂತೆ ಇರುತ್ತದೆ" ಎಂದು ಗಂಗೂಲಿ ಹೇಳಿದ್ದಾರೆ. ಕಳೆದ ವರ್ಷ, ಇದೇ ಋತುವಿನಲ್ಲಿ ದೆಹಲಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯವು ಶ್ರೀಲಂಕಾ ತಂಡದ ಆಟಗಾರರು ಮೈದಾನದಲ್ಲಿದ್ದಾಗ ಮಾಲಿನ್ಯದಿಂದಾಗಿ ಸುದ್ದಿಯಲ್ಲಿತ್ತು. ಅಲ್ಲದೆ ಪ್ರವಾಸಿ ತಂಡದ ಆಟಗಾರರು ಮಾಸ್ಕ್ ಧರಿಸಿ ಅಂಗಳಕ್ಕೆ ಇಳಿದಿದ್ದರು. ಈ ವರ್ಷವೂ ಅಷ್ಟೇ ಹೊಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಪಂದ್ಯವನ್ನು ಬೇರೆ ಸ್ಥಳಕ್ಕೆ ವರ್ಗಾಯಿಸುವಂತೆ ಮನವಿ ಮಾಡಿಕೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 