ಇಂಡೋ-ವಿಂಡೀಸ್ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದು
ಗಯಾನ, ಆ 9 ಇಲ್ಲಿನ ಪ್ರೋವಿಡೆನ್ಸ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯಬೇಕಿದ್ದ ಮೊದಲನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು.
ಇದಕ್ಕೂ ಮುನ್ನ ಟಾಸ್ ಗೆದ್ದಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಈ ವೇಳೆ ಮೈದಾನ ತೇವವಾಗಿದ್ದರಿಂದ ತೀಪುಗಾರರು ಪಂದ್ಯ ತಡವಾಗಿ ಆರಂಭಿಸಲು ನಿರ್ಧರಿಸಿದ್ದರು.
ನಂತರ ತಡವಾಗಿ ಆರಂಭವಾದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಕ್ರಿಸ್ ಗೇಲ್ ಹಾಗೂ ಎವಿನ್ ಲೆವಿಸ್ ಕಣಕ್ಕೆ ಇಳಿದರು. ಈ ಜೊಡಿ ಮುರಿಯದ ಮೊದಲನೇ ವಿಕೆಟ್ಗೆ 42 ರನ್ ಗಳಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿತು. ಭಾರಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕ್ರಿಸ್ ಗೇಲ್ 31 ಎಸೆತಗಳಲ್ಲಿ ಕೇವಲ ನಾಲ್ಕು ರನ್ ಗಳಿಸಿದ್ದಾಗ ಕುಲ್ದೀಪ್ ಯಾದವ್ಗೆ ಕ್ಲೀನ್ ಬೌಲ್ಡ್ ಆದರು.
ನಂತರ ಶಾಯ್ ಹೋಪ್ ಕ್ರೀಸ್ಗೆ ಆಗಮಿಸಿದರು. ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಎವಿನ್ ಲೆವಿಸ್ ಭಾರತದ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದರು. ಇವರು ಎದುರಿಸಿದ 36 ಎಸೆತಗಳಲ್ಲಿ ಮುರು ಸಿಕ್ಸರ್ ಹಾಗೈ ಎರಡು ಬೌಂಡರಿಯೊಂದಿಗೆ ಅಜೇಯ 40 ರನ್ ಗಳಿಸಿದರು. ಮತ್ತೊಂದು ತುದಿಯಲ್ಲಿ ಶಾಯ್ ಹೋಪ್ ಅಜೇಯ ಆರು ರನ್ ಗಳಿಸಿದರು.
ಒಟ್ಟಾರೆ, ವೆಸ್ಟ್ ಇಂಡೀಸ್ 13 ಓವರ್ಗಳ ಮುಕ್ತಾಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿದ್ದಾಗ ಮಳೆ ಆರಂಭವಾಯಿತು. ಈ ವೇಳೆ ಪಿಚ್ಗೆ ಹೊದಿಕೆ ಹಾಕಲಾಯಿತು. ಆದರೂ, ಮಳೆ ನಿಲ್ಲಲೇ ಇಲ್ಲ ಮೈದಾನವೆಲ್ಲಾ ಹೆಚ್ಚು ತೇವವಾಯಿತು. ಅಂತಿಮವಾಗಿ ತೀಪುಗಾರರು ಮೊದಲನೇ ಪಂದ್ಯವನ್ನುನಿಲ್ಲಿಸಿದರು. ಪಂದ್ಯ ಫಲಿತಾಂಶ ಹೊರಬಂದಿಲ್ಲ.
ಉಭಯ ತಂಡಗಳ ಎರಡನೇ ಪಂದ್ಯ ಆ.11 ರಂದು ಪೋರ್ಟ್ ಆಫ್ ಸ್ಪೇನ್ನಲ್ಲಿ ಜರುಗಲಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 