ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಿಂಧೂ ಪರಿಹಾರ
ಹೈದರಾಬಾದ್ , ಮಾ 26ಕೊರೊನಾ ವೈರಸ್ ಸೋಂಕು ಹರಡುವ ವಿರುದ್ಧದ ಹೋರಾಟಕ್ಕೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧೂ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಕೋವಿಡ್ -19 ವಿರುದ್ಧ ಹೋರಾಟದ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಿಂಧೂ ತಲಾ 5 ಲಕ್ಷ ರೂ.ದಾನ ನೀಡಿದ್ದಾರೆ.
ಕೊರೊನಾ ವಿರುದ್ಧ ಹೋರಾಡಲು ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ "ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ" ತಲಾ ಐದು ಲಕ್ಷ ರೂ. ದೇಣಿಗೆ ನೀಡುತ್ತೇನೆ "ಎಂದು ಅವರು ಟ್ವೀಟ್ ಮಾಡಿದ್ದಾರೆ.ಇದಕ್ಕೂ ಮುನ್ನ ನಟ ಪವನ್ ಕಲ್ಯಾಣ್, ಕೊರೊನಾ ವಿರುದ್ಧದ ಹೋರಾಟಕ್ಕೆ ಒಟ್ಟು 2 ಕೋಟಿ ರೂ. ಪರಿಹಾರ ನೀಡಿದ್ದಾರೆ. ಆಂಧ್ರ ಪ್ರೇದಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ, ನೀಡಿದರೆ, ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಿದ್ದಾರೆ. ರೈಲ್ವೆಯಲ್ಲಿ ಕೆಲಸದಲ್ಲಿರುವ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ, ಹರಿಯಾಣ ಕೊರೊನಾ ಪರಿಹಾರ ನಿಧಿಗೆ ಆರು ತಿಂಗಳ ದಾನವನ್ನು ಘೋಷಿಸಿದ್ದಾರೆ. ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್, 50 ಲಕ್ಷ ರೂ. ಪರಿಹಾರ ನೀಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 