ವಿದ್ಯಾರ್ಥಿಗಳ ಸ್ವಾವಲಂಬನೆಗೆ ಕೈಗಾರಿಕಾ ತರಬೇತಿ ಅವಶ್ಯಕ
Industrial training is essential for self-reliance of students
ಕುಕುನೂರು 08: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದವರು ಬೇಗನೆ ಸ್ವಾವಲಂಬಿಗಳಾಗುತ್ತಿದ್ದು, ಭವಿಷ್ಯದ ಜೀವನ ರೂಪಿಸಿಕೊಳ್ಳುವಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪಾತ್ರ ಹೇಳಿದಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್ ಆರ್ ಹಿರೇಮಠ ಅಭಿಪ್ರಾಯಪಟ್ಟರು ಅವರು ಕುಕುನೂರು ತಾಲೂಕಿನ ಮಂಡಲಗಿರಿಯ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಓದಿನಲ್ಲಿ ಆಸಕ್ತಿ, ಮಾಡುವ ಕಾಯಕದಲ್ಲಿ ನಿಷ್ಠೆ, ಬದುಕಿನಲ್ಲಿ ಛಲ, ಇತರರಿಗೆ ಮಾದರಿಯಾಗಬಲ್ಲ ಜೀವನ ಕ್ರಮ ಇವುಗಳು ನಮ್ಮವಾಗಿದ್ದರೆ ಹೆತ್ತವರಿಗೂ, ಶಿಕ್ಷಣ ಸಂಸ್ಥೆಗೆ, ನಮ್ಮ ಜೀವನಕ್ಕೂ ಬೆಲೆ ಸಿಕ್ಕಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಚಾರ್ಯ ಸಿ ಎಸ್ ಅಂಗಡಿ ಮಾತನಾಡಿ, ಕೈಗಾರಿಕಾ ವಲಯಗಳಲ್ಲಿ ಮಾನವ ಸಂಪನ್ಮೂಲದ ಬೇಡಿಕೆ ಹೆಚ್ಚಿತ್ತಿದೆ. ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆದ ತರಬೇತುದಾರರಿಗೆ ವಿಪುಲ ಅವಕಾಶಗಳಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂಬ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಹನುಮಂತಪ್ಪ ಉಪ್ಪಾರ, ವಿ ಎಚ್ ಮೇಟಿ, ಎಸ್ ಬಿ ಚಂಗಳಿ, ಎಸ್ ಸಿ ಪಾಟೀಲ, ಸಿಬ್ಬಂದಿ ವರ್ಗ, ತರಬೇತುದಾರರು ಹಾಜರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 