ನರೇಗಾದಡಿ ಮಾಹಿತಿ ವಿನಿಮಯ ಜಾಗೃತಿ ಕಾರ್ಯಕ್ರಮ
Information exchange awareness program under NAREGA
ಕಾರವಾರ, ಸೆ.17:- ಹೊನ್ನಾವರ ತಾಲೂಕಿನ ಕೊಡಾಣಿ ಹಾಗೂ ಮಾಗೋಡ ಗ್ರಾಮ ಪಂಚಾಯತ್ ಗಳಲ್ಲಿ ನರೇಗಾ ಯೋಜನೆಯ ಕುರಿತಾದ ಮಾಹಿತಿ ನೀಡಲು ಹಾಗೂ ಕೂಲಿಕಾರರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಮಂಗಳವಾರ ದುಡಿಯೋಣ ಬಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಯಿತು.
ದುಡಿಯೋಣ ಬಾ ಅಭಿಯಾನದಲ್ಲಿ ನರೇಗಾದಡಿ ಸಿಗುವ ಸೌಲತ್ತುಗಳು, ಕೂಲಿಕಾರರ ದಿನಗೂಲಿ ರೂ 370ಕ್ಕೆ ಏರಿಕೆಯಾಗಿರುವುದು, ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಹೆಚ್ಚಿಸುವುದು, ಕೆಲಸದಲ್ಲಿನ ವಿನಾಯಿತಿ, ಯೋಜನೆಯಡಿ ಸಿಗುವ ಸಹಾಯಧನದ ಬಳಕೆ, ಮಹಿಳೆಯರಿಗೆ ಇರುವ ಸೌಲತ್ತುಗಳು, ಎನ್ಎಮ್ಎಮ್ಎಸ್ ಹಾಜರಾತಿ ಇತ್ಯಾದಿ ವಿಷಯಗಳ ಕುರಿತು ತಾಂತ್ರಿಕ ಸಂಯೋಜಕ ಸುನೀಲ್ ಹಾಗೂ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ ಮಾಹಿತಿ ನೀಡಿದರು.
ನಂತರ ನರೇಗಾ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ನೀಡುವ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಪಡೆಯುವಂತೆ ಹಾಗೂ ಸಾರ್ವಜನಿಕ ಕಾಮಗಾರಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಎಮ್ ಡಿ ಸಾದಿಕ್, ಎಮ್ ಕೆ ನಾಯ್ಕ, ಕೊಡಾಣಿ ಗ್ರಾಮ ಪಂಚಾಯತ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಗ್ರಾಮ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 