ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್ ಫೌಂಡೇಶನ್ - ಜೀವನಾಶ್ಯಕ ವಸ್ತುಗಳ ವಿತರಣೆ
ಬೆಂಗಳೂರು ಏ 19,ಕರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಹಸ್ರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಮುಂದಾಗಿದ್ದಾರೆ.ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಇನ್ಫೋಸಿಸ್ ಫೌಂಡೇಶನ್ ವಿತರಿಸುತ್ತಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್ ಆಫೀಸ್ ಬಳಿ ಚಾಲನೆ ನೀಡಲಾಯಿತು.ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಅಧ್ಯಕ್ಷ ಸಾ ರಾ ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷ ರವಿ ಶಂಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಿಸಲಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ, ಇನ್ಪೋಸಿಸ್ದೇಶ ಹಾಗೂ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 