ಅಮ್ಮಿನಬಾವಿ ಹಿರೇಮಠದಲ್ಲಿ ಜಂಗಮ ವಟುಗಳಿಗೆ ದೀಕ್ಷೆ
ಲೋಕದರ್ಶನ ವರದಿ
ಅಮ್ಮಿನಬಾವಿ 25: ಧಾರವಾಡ ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಶ್ರೀಗುರುಶಾಂತಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ 16 ಜಂಗಮ ವಟುಗಳಿಗೆ ಸೋಮವಾರ ಶಾಸ್ತ್ರೋಕ್ತವಾಗಿ ದೀಕ್ಷೆ ನೀಡಲಾಯಿತು.
ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಲಬುರ್ಗಿ ಜಿಲ್ಲೆ ಬೆಳಗುಂಪಾ ಬೃಹನ್ಮಠದ ಶ್ರೀಅಭಿನವ ಪರ್ವತೇಶ್ವರ ಶಿವಾಚಾರ್ಯ ಸ್ವಾಮೀಜಿ ವೀರಶೈವ ಧರ್ಮ ಸಿದ್ಧಾಂತ ಪರಂಪರೆಯಂತೆ ಜರುಗಿದ ಶಾಸ್ತ್ರೋಕ್ತ ಸಂಸ್ಕಾರಗಳ ನಂತರ ವಟುಗಳಿಗೆ ಇಷ್ಟಲಿಂಗ ಧಾರಣೆಮಾಡಿ ಮಂತ್ರೋಪದೇಶ ಬೋಧಿಸಿದರು.
ಇಷ್ಟಲಿಂಗಾರ್ಚನೆ : ಪ್ರಾಣಪ್ರತಿಷ್ಠಾಪನೆ ಮಾಡಿ ಅನುಗ್ರಹಿಸಿರುವ ಇಷ್ಟಲಿಂಗವನ್ನು ಸದಾಕಾಲವೂ ಎದೆಯ ಮೇಲೆಯೇ ಧಾರಣೆ ಮಾಡಿರಬೇಕು. ಇಷ್ಟಲಿಂಗವನ್ನು ಬಿಟ್ಟು ಅರೆಕ್ಷಣವೂ ಇರಬಾರದು. ನಿತ್ಯದಲ್ಲಿ ಇಷ್ಟಲಿಂಗಾರ್ಚನೆ ರೂಢಿಸಿಕೊಂಡರೆ ದಿನಚರಿಯ ಕ್ಷಣಗಳು ಪ್ರಫುಲ್ಲಿತವಾಗಿರುತ್ತವೆ ಎಂದು ಬೆಳಗುಂಪಾ ಬೃಹನ್ಮಠದ ಶ್ರೀಗಳು ಎಲ್ಲ ವಟುಗಳಿಗೆ ಉಪದೇಶ ಮಾಡಿದರು.
ವೈದಿಕರುಗಳಾದ ಎಸ್.ಎಂ. ಪ್ರಶಾಂತ ರಾಜಗುರು, ಕುಮಾರಸ್ವಾಮಿ ಹಾಗೂ ಸೋಮಲಿಂಗಶಾಸ್ತ್ರಿ ಗುಡ್ಡದಮಠ ಅವರು ದೀಕ್ಷಾ ಕಾರ್ಯದ ಪೂಜಾ ಕೈಂಕರ್ಯಗಳನ್ನು ನಿರ್ವಹಿಸಿದರು. ಹಳೇಹುಬ್ಬಳ್ಳಿಯ ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಮಿತಿಯ ವತಿಯಿಂದ ಪದಾಧಿಕಾರಿಗಳಾದ ವೀರಯ್ಯಸ್ವಾಮಿ ಸಾಲಿಮಠ, ಚೆನ್ನಬಸಯ್ಯ ಹಿರೇಮಠ, ಪ್ರಕಾಶ ಕುಲಕರ್ಣಿ ಹಾಗೂ ಡಾ. ಫಕ್ಕೀರಯ್ಯ ಬಿಚಗತ್ತಿಮಠ ಅವರು ಎಲ್ಲಾ ವಟುಗಳಿಗೆ ಶ್ರೀಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಹಾಗೂ ಶಿವಪೂಜಾ ವಿಧಿ ಪುಸ್ತಕವನ್ನು ಶ್ರೀಗಳ ಮೂಲಕ ವಿತರಣೆ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 